ಬಿಜೆಪಿ ಕಚೇರಿಯಲ್ಲಿರಾಧಿಜ್ಯೋಧಿತ್ಸವ

Contributed byKeerthi Prasad|Vijaya Karnataka

ಬೆಂಗಳೂರಿನಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ಶನಿವಾರ ಸಡಗರದಿಂದ ಆಚರಿಸಲಾಯಿತು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಕನ್ನಡ ಭಾಷೆಯ ಹಿರಿಮೆ, ಕರ್ನಾಟಕ ಏಕೀಕರಣಕ್ಕಾಗಿ ಹೋರಾಡಿದವರ ತ್ಯಾಗವನ್ನು ಸ್ಮರಿಸಲಾಯಿತು. ಸಾಹಿತಿಗಳ ಕೊಡುಗೆಯನ್ನೂ ನೆನಪಿಸಿಕೊಳ್ಳಲಾಯಿತು.

bjp office celebrates 70th kannada rajyotsava
ಬೆಂಗಳೂರಿನಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಧ್ವಜಾರೋಹಣ ನೆರವೇರಿಸಿ, ಕನ್ನಡ ಮತ್ತು ಕರ್ನಾಟಕದ ಏಕೀಕರಣಕ್ಕಾಗಿ ಹೋರಾಡಿದ ಹಿರಿಯರ ತ್ಯಾಗವನ್ನು ಸ್ಮರಿಸಿದರು. ಕನ್ನಡ ಭಾಷೆಯ ಪ್ರಾಚೀನತೆ ಮತ್ತು ಸಾಹಿತಿಗಳ ಕೊಡುಗೆಯನ್ನು ಅವರು ಶ್ಲಾಘಿಸಿದರು. ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ಪ್ರತಿಪಕ್ಷ ಮುಖ್ಯ ಸಚೇತಕ ಎನ್‌.ರವಿಕುಮಾರ್‌ ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಧ್ವಜಾರೋಹಣ ಮಾಡಿ ಎಲ್ಲರಿಗೂ ರಾಜ್ಯೋತ್ಸವದ ಶುಭಾಶಯ ತಿಳಿಸಿದರು. ಅವರು ಮಾತನಾಡಿ, "ಅರಿಶಿಣ, ಕುಂಕುಮ ವರ್ಣದ ಕನ್ನಡಾಂಬೆಯ ಧ್ವಜವನ್ನು ನಮ್ಮ ಹಿರಿಯರು ಶುಭದ ಸಂಕೇತವಾಗಿ ಸ್ವೀಕರಿಸಿದ್ದಾರೆ. ಕನ್ನಡ, ಕರ್ನಾಟಕದ ಏಕೀಕರಣಕ್ಕಾಗಿ ಲಕ್ಷಾಂತರ ಮಂದಿ ಹೋರಾಟ ಮಾಡಿದ್ದಾರೆ. ಅಂದಿನ ಕಾಲದಲ್ಲಿ ಲಾಠಿಯೇಟು ತಿಂದಿದ್ದರು. ಕಷ್ಟವನ್ನೂ ಅನುಭವಿಸಿದ್ದರು. ಕರ್ನಾಟಕವನ್ನು ಒಟ್ಟುಗೂಡಿಸಲು ಹಿರಿಯರು ಮಾಡಿದ ತ್ಯಾಗಕ್ಕೆ ನಾವೆಲ್ಲರೂ ಕೃತಜ್ಞತೆ ಸಲ್ಲಿಸಬೇಕು. ಅವರನ್ನು ಸದಾ ಸ್ಮರಿಸಬೇಕಿದೆ," ಎಂದು ಹೇಳಿದರು.
ಕನ್ನಡ ಭಾಷೆಯ ಮಹತ್ವವನ್ನು ವಿವರಿಸಿದ ಶೋಭಾ ಕರಂದ್ಲಾಜೆ, "ಕನ್ನಡ ಅತ್ಯಂತ ಪ್ರಾಚೀನ ಭಾಷೆ. ಕನ್ನಡಕ್ಕೆ ಅದರದೇ ಆದ ಹಿರಿಮೆ, ಗೌರವ ಇದೆ. ಕನ್ನಡದ ಬೆಳವಣಿಗೆಗೆ ನೂರಾರು ಸಾಹಿತಿಗಳು ಕೊಡುಗೆ ನೀಡಿದ್ದಾರೆ. ಕುವೆಂಪು ವಿರಚಿತ ಗೀತೆಯನ್ನು ನಾವು ನಾಡಗೀತೆಯನ್ನಾಗಿ ಸ್ವೀಕರಿಸಿದ್ದೇವೆ," ಎಂದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ಪ್ರತಿಪಕ್ಷ ಮುಖ್ಯ ಸಚೇತಕ ಎನ್‌.ರವಿಕುಮಾರ್‌ ಕೂಡ ಉಪಸ್ಥಿತರಿದ್ದರು.