ವಿಕ ಸುದ್ದಿಲೋಕ ತುಮಕೂರು ಶತಮಾನ ಗಳಿಂದಲೂ ದಬ್ಬಾಳಿಕೆ, ಅಸ್ಪೃಶ್ಯತೆ ಮತ್ತು ಶೋಷಣೆಗಳಿಗೆ ಬಲಿಯಾದ ದಲಿತ, ಆದಿವಾಸಿ ಮತ್ತು ಮಹಿಳಾ ಸಮುದಾಯ ಇಂದಿಗೂ ದೌರ್ಜನ್ಯದಿಂದ ಮುಕ್ತವಾಗಿಲ್ಲಎಂದು ಸಿಪಿಐ ಜಿಲ್ಲಾಕಾರ್ಯದರ್ಶಿ ಗಿರೀಶ್ ಆರೋಪಿಸಿದರು. ನಗರದ ಅಶೋಕ ರಸ್ತೆಯಲ್ಲಿರುವ ಬಿಎಸ್ ಎನ್ ಎಲ್ ಕಚೇರಿ ಮುಂಭಾಗ ಅಖಿಲ ಭಾರತ ಪ್ರತಿಭಟನಾ ದಿನದ ಅಂಗವಾಗಿ ಭಾರತ ಕಮ್ಯುನಿಸ್ಟ್ ಪಕ್ಷ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿಮಾತನಾಡಿದ ಅವರು, ಬಿಹಾರದ ಚುನಾವಣೆಯಲ್ಲಿಬಿಜೆಪಿ ಅಭಿವೃದ್ಧಿಗಾಗಿ ಗೆದ್ದಿದೆ ಎಂಬುದು ಸುಳ್ಳು. ಚುನಾವಣೆಗೆ 30 ದಿನಕ್ಕಿಂತ ಮುಂಚೆ ಸಾರ್ವಜನಿಕರ ತೆರಿಗೆ ಹಣವನ್ನು ಮಹಿಳೆಯರ ಖಾತೆಗಳಿಗೆ ವರ್ಗಾವಣೆ ಮಾಡಿದೆ. ಹಾಗಾಗಿ ಚುನಾವಣೆಯಲ್ಲಿಗೆದ್ದಿದೆ. ಮಹಿಳೆಯರು, ಆದಿವಾಸಿಗಳು, ಅಲ್ಪಸಂಖ್ಯಾತರ ಮತಗಳನ್ನು ವಿಭಜಿಸಿ ಬಿಜೆಪಿ ಗೆದ್ದಿದೆ ಎಂದು ಆರೋಪಿಸಿದರು. ಕರ್ನಾಟಕದಲ್ಲೂಸಹ ರೈತರ ಅಪ್ಪಣೆಯಿಲ್ಲದೆ ದೌರ್ಜನ್ಯದಿಂದ ಭೂಸ್ವಾಧೀನ ಮಾಡಲಾಗುತ್ತಿದೆ. ಇದು ರೈತ ವಿರೋಧಿ ಎಂದ ಅವರು, ರಾಜ್ಯ ಕಾಂಗ್ರೆಸ್ ಸರಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ರೈತರ ಒಪ್ಪಿಗೆ ಪಡೆದು ಭೂ ಸ್ವಾಧೀನ ಮಾಡಬೇಕು. ಬಲವಂತದಿಂದ ರೈತರ ಭೂಮಿ ಸ್ವಾಧೀನ ಪಡಿಸಿಕೊಳ್ಳುವುದನ್ನು ಭಾರತ ಕಮ್ಯುನಿಸ್ಟ್ ಪಕ್ಷ ವಿರೋಧಿಸುತ್ತದೆ ಎಂದರು. ಭಾರತ ಕಮ್ಯುನಿಸ್ಟ್ ಪಕ್ಷದ ಮಂಡಳಿ ಸದಸ್ಯರಾದ ಕಂಬೇಗೌಡ, ಜಿಲ್ಲಾಖಜಾಂಚಿ ಅಶ್ವಥನಾರಾಯಣ್ , ಜಿಲ್ಲಾಕಾರ್ಯದರ್ಶಿ, ಮಂಡಳಿ ಸದಸ್ಯ ರಾಜೇಶ್ , ಚಾಮುಂಡಿ ಡೆಕಸ್ಟ್ ಯೂನಿಯನ್ ಪ್ರಧಾನ ಕಾರ್ಯದರ್ಶಿ ಜಾಫರ್ , ಜಿಲ್ಲಾಮಂಡಳಿ ಸದಸ್ಯರಾದ ನಾಗರಾಜ್ , ಹಾಗಲವಾಡಿ ನಾಗರಾಜ್ ಹಾಜರಿದ್ದರು.

