ಕಿಸಾನ್ ಸಮ್ಮಾನ್ ಹಣ ಇಂದು ಖಾತೆಗೆ

Contributed byanil.kumar2@timesgroup.com|Vijaya Karnataka
Subscribe

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕಿಸಾನ್‌ ಸಮ್ಮಾನ್‌ ಯೋಜನೆಯ 21ನೇ ಕಂತನ್ನು ಬಿಡುಗಡೆ ಮಾಡಲಿದ್ದಾರೆ. ಒಂಬತ್ತು ಕೋಟಿಗೂ ಹೆಚ್ಚು ರೈತರ ಖಾತೆಗೆ ತಲಾ 2,000 ರೂ. ಜಮೆಯಾಗಲಿದೆ. ಒಟ್ಟು 18,000 ಕೋಟಿ ರೂ. ರೈತರಿಗೆ ಲಭ್ಯವಾಗಲಿದೆ. ಕೊಯಮತ್ತೂರಿನಲ್ಲಿ ನಡೆಯುವ ಕೃಷಿ ಶೃಂಗಸಭೆಯಲ್ಲಿ ಈ ಹಣ ಬಿಡುಗಡೆ ಮಾಡಲಾಗುತ್ತದೆ. ಇದಕ್ಕೂ ಮುನ್ನ ಮೋದಿ ಅವರು ಪುಟ್ಟಪರ್ತಿಗೆ ಭೇಟಿ ನೀಡಲಿದ್ದಾರೆ.

pm kisan samman nidhi 21st instalment released today

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ‘ಪಿಎಂ ಕಿಸಾನ್ ಸಮ್ಮಾನ್ ನಿಧಿ’ಯೋಜನೆಯ 21ನೇ ಕಂತನ್ನು ಬುಧವಾರ ಬಿಡುಗಡೆ ಮಾಡಲಿದ್ದಾರೆ. ಅರ್ಹ ಫಲಾನುಭವಿಗಳ ಖಾತೆಗೆ ತಲಾ 2,000 ರೂ. ಜಮೆಯಾಗಲಿದೆ. ರಾಷ್ಟ್ರವ್ಯಾಪಿ, ಸುಮಾರು ಒಂಬತ್ತು ಕೋಟಿ ರೈತರು ಈ ಯೋಜನೆಯಡಿಯಲ್ಲಿ18,000 ಕೋಟಿ ರೂ. ಪಡೆಯಲಿದ್ದಾರೆ. ತಮಿಳುನಾಡಿನ ಕೊಯಮತ್ತೂರಿಗೆ ಭೇಟಿ ನೀಡಲಿರುವ ಮೋದಿ, ಅಲ್ಲಿನಡೆಯುವ ‘ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ’ಯಲ್ಲಿಭಾಗವಹಿಸಲಿದ್ದು, ಅದೇ ಕಾರ್ಯಕ್ರಮದಲ್ಲಿಪಿಎಂ ಕಿಸಾನ್ ಹಣ ಬಿಡುಗಡೆ ಮಾಡಲಿದ್ದಾರೆ.

ಇದಕ್ಕೂ ಮುನ್ನ ಆಂಧ್ರಪ್ರದೇಶದ ಪುಟ್ಟಪರ್ತಿಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ, ಅಲ್ಲಿಸತ್ಯ ಸಾಯಿ ಬಾಬಾ ಶತಮಾನೋತ್ಸವ ಕಾರ್ಯಕ್ರಮದಲ್ಲಿಭಾಗಿಯಾಗಲಿದ್ದಾರೆ. ಸಾಯಿಬಾಬಾ ಸ್ಮರಣಾರ್ಥ ಅಂಚೆಚೀಟಿ ಮತ್ತು ನಾಣ್ಯವನ್ನು ಅವರು ಬಿಡುಗಡೆ ಮಾಡಲಿದ್ದಾರೆ.

==============

ಹೆಡ್ಸ್

* ಸೆನ್ಸೆಕ್ಸ್ 1,07,000 ತಲುಪುವ ನಿರೀಕ್ಷೆ - 00

* ಚಿನ್ನ, ಬೆಳ್ಳಿ ಗಣನೀಯ ಕುಸಿತ-00

ಸಂಬಂಧಿತ ಸುದ್ದಿ

Kannada News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ