22ರಂದು ಪಹಲ್ಗಾಮ್ ನಲ್ಲಿರಾಜ್ಯೋತ್ಸವ

Contributed bynagappa.narayanappa@timesgroup.com|Vijaya Karnataka
Subscribe

ಜಿಬಿಎ ನೌಕರರ ಸಂಘವು ನ.22ರಂದು ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿರಾಷ್ಟ್ರೀಯ ಕರ್ನಾಟಕ ರಾಜ್ಯೋತ್ಸವವನ್ನು ಆಯೋಜಿಸಿದೆ. ಈ ಸಂದರ್ಭದಲ್ಲಿಹತ್ಯೆಯಾದವರಿಗೆ ನುಡಿ ನಮನ ಸಲ್ಲಿಸಲಾಗುವುದು. ಕರುನಾಡ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಗಾಯಕಿ ಅನುರಾಧ ಭಟ್‌ ಅವರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ. ಹಲವು ಗಣ್ಯರು ಕಾರ್ಯಕ್ರಮದಲ್ಲಿಭಾಗವಹಿಸಲಿದ್ದಾರೆ.

state festival in pahalgam on 22nd a heartfelt cultural extravaganza

* ಜಿಬಿಎ ನೌಕರರ ಸಂಘದಿಂದ ಆಯೋಜನೆ

ವಿಕ ಸುದ್ದಿಲೋಕ ಬೆಂಗಳೂರು

ಗ್ರೇಟರ್ ಬೆಂಗಳೂರು ಪ್ರಾಧಿಕಾರ-ಪಾಲಿಕೆಗಳ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿನ.22ರಂದು ರಾಷ್ಟ್ರೀಯ ಕರ್ನಾಟಕ ರಾಜ್ಯೋತ್ಸವ ಹಮ್ಮಿಕೊಳ್ಳಲಾಗಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿಮಾಹಿತಿ ನೀಡಿದ ಸಂಘದ ಅಧ್ಯಕ್ಷ ಎ.ಅಮೃತ್ ರಾಜ್ , ‘‘ರಾಷ್ಟ್ರೀಯ ಕರ್ನಾಟಕ ರಾಜ್ಯೋತ್ಸವದ ಜತೆಗೆ ಪಹಲ್ಗಾಮ್ ನಲ್ಲಿಹತ್ಯೆಯಾದವರಿಗೆ ನುಡಿ ನಮನ ಸಲ್ಲಿಸಲಾಗುವುದು. ಹಾಗೆಯೇ, ಕರುನಾಡ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು,’’ ಎಂದು ಹೇಳಿದರು.

‘‘ಕನ್ನಡ ಭಾಷೆ ಉಳಿಸಿ, ಬೆಳೆಸಲು ಹಾಗೂ ವಿಶ್ವ ಭಾಷೆಯನ್ನಾಗಿಸುವ ಉದ್ದೇಶದಿಂದ 2022ರಲ್ಲಿಪ್ರಥಮ ಬಾರಿಗೆ ಕಾಶಿ, 2023ರಲ್ಲಿನೇಪಾಳದ ಪಶುಪತಿ ದೇವಾಲಯದ ಸನ್ನಿಧಾನ ಹಾಗೂ 2024ರಲ್ಲಿಹರಿದ್ವಾರದಲ್ಲಿರಾಷ್ಟ್ರೀಯ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು. ಅದೇ ರೀತಿ ಈ ಸಲ ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿನ.22ರಂದು ರಾಜ್ಯೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ,’’ ಎಂದು ತಿಳಿಸಿದರು.

‘‘ಜಿಬಿಎ ಅಧಿಕಾರಿ, ನೌಕರರಿಂದ ನಾನಾ ಸಾಂಸ್ಕೃತಿಕ ಕಾರ್ಯಕ್ರಮ, ಗಾಯಕಿ ಅನುರಾಧ ಭಟ್ ಅವರಿಂದ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ. ಮಾಜಿ ಮೇಯರ್ ಗಳಾದ ಆರ್ .ಸಂಪತ್ ರಾಜ್ , ಎಂ.ಗೌತಮ್ ಕುಮಾರ್ , ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ .ಷಡಕ್ಷರಿ, ಬೆಂಗಳೂರು ದೂರದರ್ಶನ ಕೇಂದ್ರದ ಮುಖ್ಯಸ್ಥೆ ಎಚ್ .ಎನ್ .ಆರತಿ, ಸಚಿವಾಲಯ ನೌಕರರ ಸಂಘದ ಅಧ್ಯಕ್ಷ ರಮೇಶ್ ಸಂಗ, ವಕೀಲ ಶ್ರೀನಿವಾಸ್ ಕಾರ್ಯಕ್ರಮದಲ್ಲಿಭಾಗವಹಿಸಲಿದ್ದಾರೆ,’’ ಎಂದು ವಿವರಿಸಿದರು.

ಸಂಬಂಧಿತ ಸುದ್ದಿ

Kannada News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ