ಪ್ರತಿ ತಾಲೂಕಲ್ಲಿರಕ್ತನಿಧಿ ಸ್ಥಾಪನೆ ಸ್ವಾಗತಾರ್ಹ

Contributed bybasavarajskprnews@gmail.com|Vijaya Karnataka

ರಾಜ್ಯದ ಪ್ರತಿ ತಾಲೂಕು ಕೇಂದ್ರದಲ್ಲಿ ರಕ್ತನಿಧಿ ಕೇಂದ್ರ ಸ್ಥಾಪನೆ ಹಾಗೂ ಆಟೋಗಳಿಗೆ ಕನಿಷ್ಠ 40 ರೂ. ಬಾಡಿಗೆ ದರ ನಿಗದಿಪಡಿಸಿದ ರಾಜ್ಯ ಸರ್ಕಾರದ ನಿರ್ಧಾರವನ್ನು ಕರ್ನಾಟಕ ಜನಜಾಗೃತ ವೇದಿಕೆ ಸ್ವಾಗತಿಸಿದೆ. ಸದೃಢ ಸಮಾಜ ನಿರ್ಮಾಣಕ್ಕೆ ಇದು ಸಹಕಾರಿ. ರೈತರಿಗೆ ಬೆಳೆನಷ್ಟ ಪರಿಹಾರ ಹಾಗೂ ಸಾಲ ಮನ್ನಾ ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸಲಾಗಿದೆ. ಸಣ್ಣ ಹಿಡುವಳಿದಾರರಿಗೆ 10 ಸಾವಿರ ರೂ. ಪ್ರೋತ್ಸಾಹ ಧನ ನೀಡಬೇಕೆಂದು ಆಗ್ರಹಿಸಲಾಗಿದೆ.

Vijay Karnataka

ಪ್ರತಿ ತಾಲೂಕಲ್ಲಿರಕ್ತನಿಧಿ ಸ್ಥಾಪನೆ ಸ್ವಾಗತಾರ್ಹ

ವಿಕ ಸುದ್ದಿಲೋಕ ಶಿಕಾರಿಪುರ

ಪ್ರತಿ ತಾಲೂಕು ಕೇಂದ್ರದಲ್ಲಿರಕ್ತನಿಧಿ ಕೇಂದ್ರ ಸ್ಥಾಪಿಸುವ ಜತೆಗೆ ಆಟೊಗಳಿಗೆ ಕನಿಷ್ಠ 40 ರೂ. ಬಾಡಿಗೆ ದರ ನಿಗದಿಪಡಿಸಿದ ರಾಜ್ಯ ಸರಕಾರದ ನಡೆ ಸ್ವಾಗತಾರ್ಹ ಎಂದು ಕರ್ನಾಟಕ ಜನಜಾಗೃತ ವೇದಿಕೆ ರಾಜ್ಯಾಧ್ಯಕ್ಷ ಸುರೇಶ್ ಬೇವೂರು ತಿಳಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ಸದೃಢ ಸಮಾಜ ನಿರ್ಮಾಣ ಹಾಗೂ ತೆರಿಗೆ ಪಾವತಿಸುವ ಪ್ರತಿಯೊಬ್ಬರಿಗೂ ಸರಕಾರದ ಸೌಲಭ್ಯ ಸಕಾಲಕ್ಕೆ ದೊರಕಬೇಕು. ಆಡಳಿತ ವ್ಯವಸ್ಥೆಯಲ್ಲಿನ ಲೋಪವನ್ನು ನಿರಂತರವಾಗಿ ಪತ್ರಗಳನ್ನು ಬರೆಯುವ ಮೂಲಕ ಸರಕಾರಕ್ಕೆ ತಲುಪಿಸಲಾಗುತ್ತಿದೆ. ಅತಿವೃಷ್ಟಿ, ಅನಾವೃಷ್ಟಿಯಿಂದ ತೊಂದರೆಗೊಳಗಾದ ರೈತರಿಗೆ ಬೆಳೆನಷ್ಟ ಪರಿಹಾರ ಹಾಗೂ ಸಾಲ ಮನ್ನಾಗೊಳಿಸಿ ಸಣ್ಣ ಹಿಡುವಳಿದಾರರಿಗೆ 10 ಸಾವಿರ ರೂ. ಪ್ರೋತ್ಸಾಹ ಧನ ನೀಡುವಂತೆ ಒತ್ತಾಯಿಸಲಾಗಿದೆ ಎಂದರು.

10 ಎಸ್ ಕೆ ಪಿ 2

ಸುರೇಶ್ ಬೇವೂರು