ನಾಲ್ಕು ವಾರಗಳಲ್ಲಿಮರು ಮತ ಎಣಿಕೆಗೆ ಆದೇಶ

Contributed bysunilkumarpapuu@gmail.com|Vijaya Karnataka

ಮಾಲೂರು ಶಾಸಕ ಕೆ.ವೈ.ನಂಜೇಗೌಡರ ಶಾಸಕತ್ವವನ್ನು ಹೈಕೋರ್ಟ್ ಅಸಿಂಧುಗೊಳಿಸಿತ್ತು. ಈ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ನಾಲ್ಕು ವಾರಗಳಲ್ಲಿ ಮರು ಮತ ಎಣಿಕೆ ನಡೆಸಿ ಫಲಿತಾಂಶವನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲು ಆದೇಶಿಸಿದೆ. ಅಲ್ಲಿಯವರೆಗೆ ನಂಜೇಗೌಡರ ಶಾಸಕ ಸ್ಥಾನ ಅಬಾಧಿತವಾಗಿರುತ್ತದೆ. ಮಾಲೂರಿನಲ್ಲಿ ಬೆಂಬಲಿಗರು ಸಂಭ್ರಮಾಚರಣೆ ನಡೆಸಿದ್ದಾರೆ.

order for re count of votes within four weeks

ವಿಕ ಸುದ್ದಿಲೋಕ ಕೋಲಾರ ಮಾಲೂರು ಶಾಸಕ ಕೆ.ವೈ.ನಂಜೇಗೌಡರ ಶಾಸಕತ್ವ ಅಸಿಂಧುಗೊಳಿಸಿದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆಯಾಜ್ಞೆ ನೀಡಿದೆ. ಚುನಾವಣಾ ಅಕ್ರಮಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಕೆ.ಎಸ್ .ಮಂಜುನಾಥಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ನಂಜೇಗೌಡರ ಶಾಸಕ ಸ್ಥಾನ ಅಸಿಂಧುಗೊಳಿಸಿ ಮರು ಮತ ಎಣಿಕೆಗೆ ಆದೇಶ ನೀಡಿತ್ತು. ಮೇಲ್ಮನವಿ ಸಲ್ಲಿಸಲು ನಂಜೇ ಗೌಡರಿಗೆ ತಿಂಗಳ ಕಾಲಾವಕಾಶ ನೀಡಿತ್ತು. ಶಾಸಕ ಸ್ಥಾನ ಅಸಿಂಧು ಗೊಳಿಸಿದ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ನಲ್ಲಿಶಾಸಕ ನಂಜೇಗೌಡರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ದ್ವಿಸದಸ್ಯ ಪೀಠವು ಅಸಿಂಧು ಆದೇಶಕ್ಕೆ ತಡೆಯಾಜ್ಞೆ ನೀಡಿದ್ದು, ನಾಲ್ಕು ವಾರಗಳಲ್ಲಿಮರು ಮತ ಎಣಿಕೆ ನಡೆಸಿ ಫಲಿತಾಂಶ ಪ್ರಕಟಿಸದೆ ಮುಚ್ಚಿದ ಲಕೋಟೆಯಲ್ಲಿನ್ಯಾಯಾಲಯಕ್ಕೆ ಸಲ್ಲಿಸುವಂತೆ ಆದೇಶಿಸಿದೆ. ಅದರಂತೆ ಮತ ಎಣಿಕೆ ನಡೆದು ಚುನಾವಣಾ ಫಲಿತಾಂಶ ಹೊರಬರುವವರೆಗೂ ನಂಜೇಗೌಡರ ಶಾಸಕ ಸ್ಥಾನ ಅಬಾಧಿತವೆಂದು ನ್ಯಾಯಾಲಯ ತಿಳಿಸಿದ್ದು, ಮಾಲೂರಿನಲ್ಲಿನಂಜೇಗೌಡರ ಬೆಂಬಲಿಗರು ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದ್ದಾರೆ.