ಎಲ್ಲಾಜಿಲ್ಲೆಗಳಲ್ಲೂಸೂಪರ್ ಸ್ಪೆಷಾಲಿಟಿ ಆಸ್ಪತ್ರೆ

Contributed byshashidonihaklu@gmail.com|Vijaya Karnataka

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ, ಕ್ಯಾನ್ಸರ್‌ ಆಸ್ಪತ್ರೆ ಮತ್ತು ಮೆಡಿಕಲ್‌ ಕಾಲೇಜುಗಳನ್ನು ಸ್ಥಾಪಿಸುವ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ. ಮುಂದಿನ ಐದು ವರ್ಷಗಳಲ್ಲಿ ಈ ಯೋಜನೆಗಳು ಪೂರ್ಣಗೊಳ್ಳಲಿವೆ. ಕಲಬುರಗಿ, ರಾಯಚೂರು, ಬಳ್ಳಾರಿ ಜಿಲ್ಲೆಗಳಲ್ಲಿ ಈಗಾಗಲೇ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳು ನಿರ್ಮಾಣ ಹಂತದಲ್ಲಿವೆ. ಕ್ಯಾನ್ಸರ್‌ ಚಿಕಿತ್ಸೆಗಾಗಿ ಪ್ರತಿ ಜಿಲ್ಲೆಯಲ್ಲೂ ವಿಶೇಷ ಆಸ್ಪತ್ರೆಗಳು ಬರಲಿವೆ. ತುಮಕೂರಿನಲ್ಲಿ ನೂತನ ಕ್ಯಾನ್ಸರ್‌ ಆಸ್ಪತ್ರೆ, ತಾಯಿ ಮತ್ತು ಮಕ್ಕಳ ಆಸ್ಪತ್ರೆ, ನರ್ಸಿಂಗ್‌ ಕಾಲೇಜು ಕಟ್ಟಡಗಳು ಉದ್ಘಾಟನೆಗೊಳ್ಳಲಿವೆ.

super specialty hospital in every district

ವಿಕ ಸುದ್ದಿಲೋಕ ತುಮಕೂರು ರಾಜ್ಯದ ಎಲ್ಲಾಜಿಲ್ಲೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ , ಕ್ಯಾನ್ಸರ್ ಆಸ್ಪತ್ರೆ , ಮೆಡಿಕಲ್ ಕಾಲೇಜುಗಳನ್ನು ಸ್ಥಾಪಿಸ ಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಆರ್ . ಪಾಟೀಲ ತಿಳಿಸಿದರು. ಜಿಲ್ಲಾಸ್ಪತ್ರೆ ಆವರಣದಲ್ಲಿನೂತನವಾಗಿ ನಿರ್ಮಿಸಿ ರುವ ಕ್ಯಾನ್ಸರ್ ಆಸ್ಪತ್ರೆ (ಫೆರಿಫೆರಲ್ ಕ್ಯಾನ್ಸರ್ ಸೆಂಟರ್ (ಆಂಕಾಲಜಿ ವಿಂಗ್ ) ಕಟ್ಟಡಕ್ಕೆ ಮಂಗಳ ವಾರ ಭೇಟಿ ನೀಡಿ ಪರಿಶೀಲಿಸಿದ ಅವರು, ‘‘ಮುಂದಿನ 5 ವರ್ಷಗಳಲ್ಲಿಎಲ್ಲಾಜಿಲ್ಲೆಗಳಲ್ಲಿಯೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಕ್ಯಾನ್ಸರ್ ಆಸ್ಪತ್ರೆ, ಟ್ರಾಮಾ ಕೇರ್ ಸೆಂಟರ್ ನಿರ್ಮಿಸಲು ನಿರ್ಣಯಿ ಸಲಾಗಿದೆ. ಕಲಬುರಗಿ, ರಾಯಚೂರಿನಲ್ಲಿಈಗಾಗಲೇ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲಾಗಿದ್ದು, ಬಳ್ಳಾರಿ ಯಲ್ಲಿಉದ್ಘಾಟನೆಗೆ ಸಿದ್ಧವಾಗಿದೆ. ಕೊಪ್ಪಳ ಜಿಲ್ಲೆಯಲ್ಲಿಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲು ಕಳೆದ ಆಯವ್ಯಯ ದಲ್ಲಿಮಂಡಿಸ ಲಾಗಿದೆ,’’ ಎಂದರು. ‘‘ಕ್ಯಾನ್ಸರ್ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಲು ಪ್ರತಿ ಜಿಲ್ಲೆಯಲ್ಲಿಯೂ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು. ಕಲಬುರಗಿ ಯಲ್ಲಿಈಗಾಗಲೇ ನಿರ್ಮಿಸಿರುವ 100 ಹಾಸಿಗೆಗಳುಳ್ಳ ಕ್ಯಾನ್ಸರ್ ಆಸ್ಪತ್ರೆ ಕಾರ್ಯ ನಿರ್ವ ಹಿಸುತ್ತಿದೆ. ಬಳ್ಳಾರಿ, ಬೀದರ್ , ರಾಯಚೂರಿಗೂ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕೆ ಸರಕಾರದಿಂದ ಮಂಜೂರಾತಿ ದೊರೆತಿದೆ. ಶಿವಮೊಗ್ಗ, ಮಂಡ್ಯದಲ್ಲಿಕಟ್ಟಡ ಪೂರ್ಣಗೊಂಡಿದ್ದು, ಶೀಘ್ರದಲ್ಲಿಲೋಕಾರ್ಪಣೆ ಗೊಳಿಸಲಾಗುವುದು,’’ ಎಂದರು. ತುಮಕೂರು ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 7ರಂದು ತುಮಕೂರಿನಲ್ಲಿಕ್ಯಾನ್ಸರ್ ಆಸ್ಪತ್ರೆ, ತಾಯಿ ಮತ್ತು ಮಕ್ಕಳ ಆಸ್ಪತ್ರೆ, ನರ್ಸಿಂಗ್ ಕಾಲೇಜು ಕಟ್ಟಡವನ್ನು ಉದ್ಘಾಟಿಸಲಿದ್ದಾರೆಂದು ಸಚಿವರು ತಿಳಿಸಿದರು.