ಬೆನ್ನು ನೋವು, ಚಿಕಿತ್ಸೆಗಾಗಿ ಜೈಲು ಅಧಿಕಾರಿಗಳಿಗೆ ದರ್ಶನ್ ಮನವಿ

Contributed byGirish J.R|Vijaya Karnataka
Subscribe

ನಟ ದರ್ಶನ್‌ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಅವರಿಗೆ ಬೆನ್ನು ನೋವು ಹೆಚ್ಚಾಗಿದ್ದು, ಚಿಕಿತ್ಸೆಗಾಗಿ ಜೈಲು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ವೈದ್ಯರು ಫಿಸಿಯೋಥೆರಪಿ ಅಗತ್ಯವಿದೆ ಎಂದು ಸೂಚಿಸಿದ್ದಾರೆ. ಅಧಿಕಾರಿಗಳು ಜೈಲಿನಲ್ಲಿಯೇ ವಾರಕ್ಕೆ ಎರಡು ಬಾರಿ ಫಿಸಿಯೋಥೆರಪಿ ಮಾಡಲು ನಿರ್ಧರಿಸಿದ್ದಾರೆ. ನ್ಯಾಯಾಲಯದ ಸೂಚನೆಯಂತೆ ಜೈಲಿಗೆ ಭೇಟಿ ನೀಡಿದ ಅಧಿಕಾರಿಗಳು ದರ್ಶನ್‌ ಅವರ ಮೂಲ ಸೌಕರ್ಯಗಳನ್ನು ಪರಿಶೀಲಿಸಿದ್ದಾರೆ.

back pain actor darshan requests prison officials for medical treatment

ವಿಕ ಸುದ್ದಿಲೋಕ ಬೆಂಗಳೂರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿಧಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ , ಅನಾರೋಗ್ಯದ ಸಂಬಂಧ ಜೈಲಿನ ಅಧಿಕಾರಿಗಳಿಗೆ ಮತ್ತೆ ಪತ್ರ ಬರೆದು ಚಿಕಿತ್ಸೆಗೆ ಮನವಿ ಮಾಡಿದ್ದಾರೆ. ದರ್ಶನ್ ಅವರು ಈ ಹಿಂದೆ ಬೆನ್ನು ನೋವಿಗೆ ಶಸ್ತ್ರಚಿಕಿತ್ಸೆ ಮಾಡಿಸಿಧಿಕೊಳ್ಳುವುದಾಗಿ ಹೇಳಿ ನ್ಯಾಯಾಲಯಧಿದಿಂದ ಷರತ್ತು ಬದ್ಧ ಮಧ್ಯಂತರ ಜಾಮೀನು ಪಡೆದು ಬಿಡುಗಡೆಯಾಗಿದ್ದರು. ನಂತರ ‘ಡೆವಿಲ್ ಧಿ’ ಸಿನಿಮಾದ ಚಿತ್ರೀಕರಣದಲ್ಲೇ ಹೆಚ್ಚಿನ ಸಮಯ ಕಳೆದಿದ್ದ ಅವರು ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿರಲಿಲ್ಲ. ಈ ಮಧ್ಯೆ ಸುಪ್ರೀಂ ಕೋರ್ಟ್ ಜಾಮೀನು ರದ್ದುಪಡಿಸಿದ್ದಧಿರಿಂದ ಮತ್ತೆ ಜೈಲು ಪಾಲಾಗಿದ್ದರು. ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿಸೆರೆವಾಸ ಅನುಭವಿಸುಧಿತ್ತಿರುವ ದರ್ಶನ್ , ತಮಗೆ ಒಂದು ವಾರದಿಂದ ಬೆನ್ನು ನೋವು ಹೆಚ್ಚಾಗಿದೆ. ಹೀಗಾಗಿ, ಕುಂಟುತ್ತಲೇ ನಡೆಯುವಂತಾಗಿದೆ. ಬೆನ್ನು ನೋವಿನ ಸಮಸ್ಯೆಗೆ ಹೆಚ್ಚಿನ ಚಿಕಿತ್ಸೆ ಬೇಕೆಂದು ಜೈಲಿನ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ದರ್ಶನ್ ಮನವಿ ಮೇರೆಗೆ ಅಧಿಕಾರಿಗಳು, ಖಾಸಗಿ ಆಸ್ಪತ್ರೆ ವೈದ್ಯರಿಂದ ಅವರ ಆರೋಗ್ಯ ತಪಾಸಣೆ ಮಾಡಿಸಿದ್ದಾರೆ. ವೈದ್ಯರು ದರ್ಶನ್ ಅವರಿಗೆ ಫಿಸಿಯೋಥೆರಪಿ ಅವಶ್ಯಕತೆ ಇದೆ ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವೈದ್ಯರ ಸಲಹೆಯಂತೆ ದರ್ಶನ್ ಗೆ ಜೈಲಿನಲ್ಲೇ ವಾರ ದಲ್ಲಿ2 ಬಾರಿ ಫಿಸಿಯೋಥೆರಪಿ ಮಾಡಿ ಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ. ಜೈಲಿನಲ್ಲಿಪರಿಶೀಲನೆ: ಈ ಮಧ್ಯೆ, ಕೋರ್ಟ್ ನ ಸೂಚನೆಯಂತೆ ಬೆಂಗಳೂರು ನಗರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ.ಬಿ. ವರದರಾಜು ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಖುದ್ದು ಭೇಟಿ ನೀಡಿ, ಜೈಲಿನಲ್ಲಿದರ್ಶನ್ ಅವರಿಗೆ ಕಲ್ಪಿಸಿರುವ ಮೂಲಧಿಸೌಕರ್ಯಧಿಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ದರ್ಶನ್ ಅವರನ್ನು ಇರಿಸಲಾಗಿರುವ ಸೆಲ್ ನಲ್ಲಿವರದಧಿರಾಜು ಅವರು ತಪಾಸಣೆ ಮಾಡಿದ್ದಾರೆ. ಅಲ್ಲದೆ, ದರ್ಶನ್ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಧಿಕೊಂಡಿಧಿದ್ದಾರೆ. ಜೈಲಿನ ಅಧಿಕಾರಿಗಳು ಕಾರಾಧಿಗೃಹದ ನಿಯಮಾಧಿವಳಿ ಅನುಸಾರ ದರ್ಶನ್ ಗೆ ಕೊಟ್ಟಿಧಿಧಿರುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದ್ದಾರೆ. ಜೈಲಿನಲ್ಲಿಪರಿಶೀಲನೆ ನಡೆಸಿದ ಸಂಬಂಧ ವರದರಾಜು ಅವರು ನಗರದ 57ನೇ ಸಿಸಿಎಚ್ ನ್ಯಾಯಾಲಯಕ್ಕೆ ಅ.18ರೊಳಗೆ ವರದಿ ಸಲ್ಲಿಸಲಿದ್ದು, ಬಳಿಕ ಕೋರ್ಟ್ ದರ್ಶನ್ ಅವರಿಗೆ ಹೆಚ್ಚುವರಿ ಸೌಲಭ್ಯ ಕಲ್ಪಿಸುವ ಸಂಬಂಧ ನಿರ್ಧರಿಸಲಿದೆ.

ಸಂಬಂಧಿತ ಸುದ್ದಿ

Kannada News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ