ಪೌರಕಾರ್ಮಿಕರ ಸೇವೆ ಗೌರವಿಸಿ: ಸಚಿವ

Contributed byrcpmalli@yahoo.co.in|Vijaya Karnataka
Subscribe

ದೇವನಹಳ್ಳಿ ಪಟ್ಟಣದಲ್ಲಿ ಪೌರಕಾರ್ಮಿಕರ ದಿನಾಚರಣೆ ಆಚರಿಸಲಾಯಿತು. ಸಚಿವ ಕೆ.ಎಚ್‌.ಮುನಿಯಪ್ಪ ಅವರು ಪೌರಕಾರ್ಮಿಕರ ಸೇವೆಯನ್ನು ಶ್ಲಾಘಿಸಿದರು. ನಿವೇಶನ ರಹಿತರಿಗೆ ನಿವೇಶನ, ಕುಡಿಯುವ ನೀರಿನ ಯೋಜನೆ, ಮನೆಗಳ ನಿರ್ಮಾಣ, ಚಿತಾಗಾರ ವ್ಯವಸ್ಥೆ, ಸಿಸಿ ರಸ್ತೆ ಕಾಮಗಾರಿಗಳ ಬಗ್ಗೆ ಸಚಿವರು ಮಾಹಿತಿ ನೀಡಿದರು. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಒಟ್ಟಾಗಿ ಕೆಲಸ ಮಾಡುವಂತೆ ತಿಳಿಸಿದರು.

honoring the service of public servants secretary

ವಿಕ ಸುದ್ದಿಲೋಕ ದೇವನಹಳ್ಳಿ ಪೌರಕಾರ್ಮಿಕ ಸೇವೆ ಪವಿತ್ರವಾದುದ್ದು, ನಾವು ಮಾಡುವ ಕೆಲಸವನ್ನು ಅವರು ಮಾಡಿ ನಮ್ಮೆಲ್ಲರ ಆರೋಗ್ಯ ಕಾಪಾಡುತ್ತಿದ್ದಾರೆ ಅಂತಹವರನ್ನು ಪ್ರತಿಯೊಬ್ಬರು ಗೌರವಿಸಬೇಕು ಎಂದು ಜಿಲ್ಲಾಉಸ್ತುವಾರಿ ಸಚಿವ ಕೆ.ಎಚ್ .ಮುನಿಯಪ್ಪ ತಿಳಿಸಿದರು. ದೇವನಹಳ್ಳಿ ಪಟ್ಟಣದ ಪುರಸಭೆ ಕಚೇರಿ ಆವರಣದಲ್ಲಿಹಮ್ಮಿಕೊಂಡಿದ್ದ ಆಯುಧ ಪೂಜೆ, ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿಮಾತನಾಡಿದ ಅವರು. ದೇವನಹಳ್ಳಿ ಪಟ್ಟಣದ ವ್ಯಾಪ್ತಿಯಲ್ಲಿನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಮಾಡಲು ಸರಾಕಾರಿ ಜಾಗ ಗುರುತಿಸಿ ಪ್ರಸ್ತಾವನೆ ಸಲ್ಲಿಸಿದರೆ ಕ್ರಮವಹಿಸಲಾಗುವುದು. ಹಾಗೂ ಕುಡಿಯುವ ನೀರಿನ ಯೋಜನೆಗೆ ಮಂಜೂರಾಗಿದ್ದ 50 ಕೋಟಿ ಹಣ ಸರಕಾರಕ್ಕೆ ವಾಪಸಾಗಿತ್ತು ಆ ಹಣವನ್ನು ಮತ್ತೆ ಹಸ್ತಾಂತರಮಾಡಲಾಗಿದೆ. ಸಚಿವರಾದ ಜಮೀರ್ ಅಹಮದ್ ಅವರು ಉತ್ತಮವಾಗಿ ಕೆಲಸ ಮಾಡುತ್ತಿದ್ದು ಗ್ರಾಮಾಂತರ ಜಿಲ್ಲೆಗೆ 2500 ದೇವನಹಳ್ಳಿಗೆ 1 ಸಾವಿರ ಮನೆಗಳನ್ನು ಮಂಜೂರು ಮಾಡಿದ್ದಾರೆ ಅವರ ವ್ಯಾಪ್ತಿಯಲ್ಲಿಬರುವ ಎಲ್ಲಕೆಲಸಗಳನ್ನು ಅವರು ಮಾಡಲು ತಯಾರಿದ್ದಾರೆ. ಬೊಮ್ಮವಾರದ ಬಳಿ ಕಾಯಂ ಪೌರಕಾರ್ಮಿಕರಿಗೆ ನಿವೇಶನ ಹಂಚಿಕೆ ಪ್ರಕ್ರಿಯೆ ನಡೆಯುತ್ತಿರುವುದು ಸಂತೋಷದ ವಿಷಯ ಆದಷ್ಟು ಬೇಗ ಅವರಿಗೆ ಹಕ್ಕುಪತ್ರಗಳನ್ನು ವಿತರಣೆ ಮಾಡಿ ಎಂದರು. ಚಿತಾಗಾರ ಬೇಕೆಂದು ಮನವಿ ಮಾಡಿದ್ದಾರೆ ಆದಷ್ಟು ಬೇಗ ಚಿತಾಗಾರ ವ್ಯವಸ್ಥೆ ಮಾಡಲಾಗುವುದು. ದೇವನಹಳ್ಳಿ ಪಟ್ಣಣದಲ್ಲಿನಡೆಯುತ್ತಿರುವ ಸಿಸಿ ರಸ್ತೆ ಕಾಮಗಾರಿ 40 ವರ್ಷ ಬಾಳಿಕೆ ಬರಬೇಕು ಆಗಾಗಿ ಕಾಮಗಾರಿ ಸ್ವಲ್ಪ ವಿಳಂಬವಾಗುತ್ತಿದೆ ತ್ವರಿತವಾಗಿ ಪೂರ್ಣಗೊಳಿಸಲು ತಿಳಿಸುತ್ತೇನೆ. ರಸ್ತೆ ಕಾಮಗಾರಿ ಮುಗಿದ ನಂತರ 1.5 ಮೀಟರ್ ಅಗಲ ಚರಂಡಿ ಕಾಮಗಾರಿ ಮಾಡಲಾಗುವುದು. ಪುರಸಭೆ ಅಧಿಕಾರಿಗಳು ಸದಸ್ಯರು ಪುರಸಭೆ ವ್ಯಾಪ್ತಿಯಲ್ಲಿ ಜಾಗ ಹುಡುಕಿ ಕೊಟ್ಟರೆ ಸೌಲಭ್ಯ ಕಲ್ಪಿಸಲು ಸಾಧ್ಯ ಹಾಗಾಗಿ ಅಧಿಕಾರಿಗಳು ಜಾಗ ಗುರುತಿಸಿಕೊಡಬೇಕು ಎಂದರು. ಇದೆ ವೇಳೆ ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷ ಸಿ.ಜಗನ್ನಾಥ್ , ಪುರಸಭೆ ಅದ್ಯಕ್ಷ ಡಿ.ಎಂ.ಮುನಿಕೃಷ್ಣ, ಉಪಾಧ್ಯಕ್ಷ ಜಿ.ಎ.ರವಿಂದ್ರ, ಸ್ಥಾಯಿಸಮಿತಿ ಅಧ್ಯಕ್ಷೆ ಕೋಮಲ, ಸದಸ್ಯರಾದ ಲೀಲಾವತಿ ಶಿವಕುಮಾರ್ , ರತ್ನಮ್ಮ, ಎಸ್ .ಸಿ.ಚಂದ್ರಪ್ಪ, ರಘು, ಪುರಸಭೆ ಮುಖ್ಯಾಧಿಕಾರಿ ಶಿವಮೂರ್ತಿ, ಕಂದಾಯ ನಿರೀಕ್ಷಕ ಎ.ಮಂಜುನಾಥ್ , ಪೌರಸೇವಾ ನೌಕರರ ಸಂಘದ ಅಧ್ಯಕ್ಷ ಮಂಜಪ್ಪ, ಪ್ರಥಮದರ್ಜೆ ಸಹಾಯಕ ಶ್ರೀನಿವಾಸ್ , ಮಂಜುನಾಥ್ , ಹಿರಿಯ ಆರೋಗ್ಯ ನಿರೀಕ್ಷಕಿ ಶ್ರೀದೇವಿ, ಕಚೇರಿ ವ್ಯವಸ್ಥಾಪಕಿ ಸರಸ್ವತಿ, ಪುರಸಭೆ ಸಿಬ್ಬಂದಿ, ಪೌರಕಾರ್ಮಿಕರು ಇದ್ದರು.

ಸಂಬಂಧಿತ ಸುದ್ದಿ

Kannada News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ