ಸೇಡಂ ಸುದ್ದಿ

Contributed bysidduswami25@gmail.com|Vijaya Karnataka
Subscribe

ಸೇಡಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವ ಸೌರಭ ಕಾರ್ಯಕ್ರಮ ನಡೆಯಿತು. ಹಿರಿಯ ಸಾಹಿತಿ ಲಿಂಗಾರೆಡ್ಡಿ ಶೇರಿ ಅವರು ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಸೃಜನಶೀಲ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು. ಜಾನಪದ ಕಲೆಗಳ ಪ್ರದರ್ಶನಕ್ಕೆ ವೇದಿಕೆ ದೊರೆಯಿತು. ವಿದ್ಯಾರ್ಥಿಗಳು ವಚನ ಗಾಯನ, ಸಮೂಹ ನೃತ್ಯ, ಬಾನ್ಸುರಿ ವಾದನ, ನಾಟಕ ಪ್ರದರ್ಶನ, ಡೊಳ್ಳು ಕುಣಿತ, ಹಲಗೆ ವಾದನ ಮುಂತಾದ ಕಾರ್ಯಕ್ರಮಗಳನ್ನು ನೀಡಿದರು.

students should participate in activities along with academic learning for a better future says senior writer lingarreddy

ವಿಕ ಸುದ್ದಿಲೋಕ ಸೇಡಂ ವಿದ್ಯಾರ್ಥಿಗಳು ಪಠ್ಯದ ಕಲಿಕೆ ಜೊತೆಗೆ ಸೃಜನಶೀಲ ಚಟುವಟಿಕೆಗಳಲ್ಲಿಪಾಲ್ಗೊಳ್ಳಬೇಕು. ಇದರಿಂದ ಭವಿಷ್ಯದಲ್ಲಿಸಮಾಜದಲ್ಲಿಉತ್ತಮ ಅವಕಾಶಗಳು ದೊರೆತರೆ ನಾಡಿನಲ್ಲಿಒಳ್ಳೆಯ ಹೆಸರು ಗಳಿಸಲು ಸಾಧ್ಯ ಎಂದು ಹಿರಿಯ ಸಾಹಿತಿ ಹಾಗೂ ಸಿಡಿಸಿ ಸದಸ್ಯ ಲಿಂಗಾರೆಡ್ಡಿ ಶೇರಿ ಹೇಳಿದರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಯೋಜಿಸಿದ್ದ ಯುವ ಸೌರಭ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಯುವಸೌರಭದಂತಹ ಕಾರ್ಯಕ್ರಮ ಗಳು ವಿದ್ಯಾರ್ಥಿಗಳಲ್ಲಿಜಾನಪದ ಪ್ರಕಾರಗಳ ಕುರಿತು ಆಸಕ್ತಿ ಹೆಚ್ಚಿಸುವಲ್ಲಿಸಹಕಾರಿ. ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಗಳನ್ನು ಅಸ್ವಾದಿಸುವ ಮೂಲಕ ನಮ್ಮಲ್ಲಿಸಂಸ್ಕಾರ ಬೆಳೆಯುತ್ತದೆ. ಶಿಕ್ಷಣದೊಂದಿಗೆ ಕಲೆಗಳಲ್ಲಿತೊಡಗಿಸಿಕೊಳ್ಳುವುದರಿಂದ ಸಂಸ್ಕಾರಯುತ ಶಿಕ್ಷಣ ಪಡೆಯಲು ಸಾಧ್ಯ ಎಂದರು. ಉಪನ್ಯಾಸಕಿ ಹಾಗೂ ಸಿಡಿಸಿ ಸದಸ್ಯೆ ಶೋಭಾದೇವಿ ಚಕ್ಕಿ ಮಾತನಾಡಿ, ಇಂತಹ ಕಾರ್ಯಕ್ರಮಗಳಿಂದ ಜಾನಪದ ಕಲೆಯನ್ನೇ ನಂಬಿಕೊಂಡಿರುವವರಿಗೆ ತಮ್ಮ ಕಲೆಯನ್ನು ಪ್ರದರ್ಶಿಸಲು ಉತ್ತಮ ವೇದಿಕೆಯಾಗಲಿದೆ. ನಮ್ಮ ನಾಡಿನ ಜಾನಪದ ಕಲೆ ಬಗ್ಗೆ ಈಗಿನ ಯುವ ಜನತೆಗೆ ಅರಿವು ಹಾಗೂ ಉತ್ಸಾಹ ಮೂಡಲು ಇಂತಹ ಕಾರ್ಯಕ್ರಮಗಳಿಂದ ಅವಕಾಶವಾಗಲಿದೆ ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ.ಪಂಡಿತ ಬಿ.ಕೆ. ಮಾತನಾಡಿ, ಉತ್ತಮ ಅಂಕ ಗಳಿಸಿ, ಉತ್ತೀರ್ಣರಾಗುವ ವಿದ್ಯಾರ್ಥಿಗಳು ಮಾತ್ರ ಪ್ರತಿಭಾವಂತರಲ್ಲ. ವಿವಿಧ ಕ್ಷೇತ್ರಗಳಲ್ಲಿಸಾಧನೆ ಮಾಡುವವರು ಸಹ ಪ್ರತಿಭಾವಂತರಾಗಿ ನಮ್ಮ ನಾಡಿನ ಹಾಗೂ ದೇಶಕ್ಕೆ ಕೀರ್ತಿ ತರಲು ಸಾಧ್ಯವಿದೆ ಎಂದು ಹೇಳಿದರು. ನಿವೃತ್ತ ಮುಖ್ಯಗುರು ವಿಠಲ ಬರಮಕರ ಮಾತನಾಡಿ, ಯುವ ಜನತೆ ದೇಶದ ನಿಜವಾದ ಸಂಪತ್ತು. ಅದನ್ನು ಸರಿಯಾದ ರೀತಿಯಲ್ಲಿಉಪಯೋಗವಾಗಬೇಕಿದೆ ಎಂದರು. ಈ ಸಂದರ್ಭದಲ್ಲಿಡಾ.ಜಗನ್ನಾಥ ಪಟ್ಟಣಕರ, ಡಾ. ಕೈಲಾಸಬಾಬು,ಡಾ. ಶಕೀರಾ ತನ್ವೀರ, ಡಾ.ಕಪಿಲದೇವ ಚಕ್ರವರ್ತಿ ಇತರರಿದ್ದರು. ಗಮನ ಸೆಳೆದ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು : ಯುವ ಸೌರಭ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಇದೇ ಕಾಲೇಜಿನ ವಿದ್ಯಾರ್ಥಿಗಳ ನೃತ್ಯ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆಯಾಗಿ ಗಮನ ಸೆಳೆಯಿತು. ಸುಹಾಸಿನಿ ಫುಲಾರಿ ವಚನ ಗಾಯನ ನಡೆಸಿಕೊಟ್ಟರು. ಓಂಕಾರ ನೃತ್ಯ ಸಾಧನದಿಂದ ಸಮೂಹ ನೃತ್ಯ, ಪ್ರಶಾಂತ ಗೋಲ್ಡ… ಸ್ಮಿತ್ ಅವರ ಬಾನ್ಸುರಿ ವಾದನ, ಮಾತೋಶ್ರೀ ರಮಾಬಾಯಿ ಅಂಬೇಡ್ಕರ ನಾಟಕ ಪ್ರದರ್ಶನ, ಡೊಳ್ಳು ಕುಣಿತ, ಹಲಗೆ ವಾದನ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಸಂಬಂಧಿತ ಸುದ್ದಿ

Kannada News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ