ಯಳಂದೂರಲ್ಲಿವಾಲ್ಮೀಕಿ ಜಯಂತಿ

Contributed byshankardp123@gmail.com|Vijaya Karnataka
Subscribe

ಯಳಂದೂರು ಪಟ್ಟಣದಲ್ಲಿ ಬುಧವಾರ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತು. ನಾಯಕ ಜನಾಂಗದ ವತಿಯಿಂದ ನಡೆದ ಈ ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು, ವಾದ್ಯ ಮೇಳಗಳು ಪಾಲ್ಗೊಂಡಿದ್ದವು. ಯುವಕರು ತಮಟೆ ಸದ್ದಿಗೆ ಹೆಜ್ಜೆ ಹಾಕಿದರು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿತು. ಈ ಕಾರ್ಯಕ್ರಮದಲ್ಲಿ ಯಜಮಾನರು, ಮುಖಂಡರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

valmiki jayanti celebration in yalandur

ವಿಕ ಸುದ್ದಿಲೋಕ ಯಳಂದೂರು ಪಟ್ಟಣದ ನಾಯಕ ಜನಾಂಗದ ವತಿಯಿಂದ ಬುಧÜವಾರ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು. ಪಟ್ಟಣದ 7 ಬೀದಿಯ ನಾಯಕ ಜನಾಂಗದ ಯಜಮಾನರು, ಮುಖಂಡರು ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿವಾಲ್ಮೀಕಿ ಅವರ ಭಾವಚಿತ್ರವನ್ನು ಬೆಳ್ಳಿರಥದ ತೆರೆದ ವಾಹನದ ಮೇಲೆ ಇರಿಸಿ ಮೆರವಣಿಗೆಗೆ ಚಾಲನೆ ನೀಡಿದರು. ನಂತರ ವೀರಗಾಸೆ, ಡೊಳ್ಳು ಕುಣಿತ, ಗಾರುಡಿ ಗೊಂಬೆ, ಗೊಲ್ಲರ ಕುಣಿತ ಸೇರಿದಂತೆ ವಿವಿಧ ಕಲಾ ತಂಡಗಳು, ವಾದ್ಯ ಮೇಳ ದೊಂದಿಗೆ ಯುವಕರು ತಮಟೆ ಸದ್ದಿಗೆ ಹೆಜ್ಜೆ ಹಾಕಿದರು. ಎಸ್ ಬಿಐ ಬ್ಯಾಂಕಿನಿಂದ ದೊಡ್ಡ ಅಂಗಡಿ ಬೀದಿ, ಬಳೇಪೇಟೆ, ಬಸ್ ನಿಲ್ದಾಣ, ಮಹದೇಶ್ವರ ಚಿತ್ರಮಂದಿರ ಮೂಲಕ ಮೆರವಣಿಗೆ ಮಾಡಲಾಯಿತು. ವರಹಸ್ವಾಮಿ ದೇವಾಲಯದ ಹತ್ತಿರದ ಕಾರು ನಿಲ್ದಾಣದಲ್ಲಿಮೆರವಣಿಗೆ ಅಂತ್ಯವಾಯಿತು. ಪಟ್ಟಣದ ಯಜಮಾನರು, ಮುಖಂಡರು, ಸಾರ್ವಜನಿಕರು ಹಾಜರಿದ್ದರು.

ಸಂಬಂಧಿತ ಸುದ್ದಿ

Kannada News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ