(ಆರೆಸ್ಸೆಸ್ ಸುದ್ದಿಗೆ ಬಾಕ್ಸ್ )

Contributed byRamesh.Jadhav@timesgroup.com|Vijaya Karnataka
Subscribe

ಪಿಡಿಒ ಪ್ರವೀಣ್‌ ಕುಮಾರ್‌ ಅವರ ಅಮಾನತು ಆದೇಶಕ್ಕೆ ಕೆಎಟಿ ತಡೆ ನೀಡಿದೆ. ರಾಯಚೂರಿನಲ್ಲಿ ನಡೆದ ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಅವರು ಭಾಗವಹಿಸಿದ್ದರು. ಈ ಹಿಂದೆ ಸಾರ್ವಜನಿಕ ಸ್ಥಳಗಳಲ್ಲಿ ಸೇರಲು ಪೊಲೀಸರ ಅನುಮತಿ ಕಡ್ಡಾಯಗೊಳಿಸಿದ್ದ ಆದೇಶಕ್ಕೂ ಹೈಕೋರ್ಟ್‌ ತಡೆ ನೀಡಿತ್ತು. ಕೆಎಟಿ ಆದೇಶದಿಂದ ಸರಕಾರಕ್ಕೆ ಮುಖಭಂಗವಾಗಿದೆ. ಪ್ರವೀಣ್‌ ಕುಮಾರ್‌ ಅವರು ಸರಕಾರದ ಆದೇಶ ಪ್ರಶ್ನಿಸಿ ಕೆಎಟಿ ಮೆಟ್ಟಿಲೇರಿದ್ದರು.

praveen kumars participation in rss procession leads to another government setback

ಪಿಧಿಡಿಒ ಪ್ರಧಿವೀಣ್ ಅಧಿಮಾಧಿನಧಿತಿಗೆ ತಧಿಡೆ

ಬೆಂಗಳೂರು: ರಾಯಚೂರಿನ ಲಿಂಗಸುಗೂರಿನಲ್ಲಿನಡೆದ ಆರ್ ಎಸ್ ಎಸ್ ಪಥಸಂಚಲನದಲ್ಲಿಭಾಗವಹಿಸಿದ್ದಕ್ಕಾಗಿ ಪಿಡಿಒ ಪ್ರವೀಣ್ ಕುಮಾರ್ ಅವರನ್ನು ಅಮಾನತು ಮಾಡಿ ಸರಕಾರ ಹೊರಡಿಸಿದ್ದ ಆದೇಶಕ್ಕೆ ಕೆಎಟಿ ( ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿ ) ಗುರುವಾರ ತಡೆ ನೀಡಿದೆ. ಇದರಿಂದಾಗಿ ಸರಕಾರಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ಮಂಗಳವಾರವಷ್ಟೇ ಆರ್ ಎಸ್ ಎಸ್ ನಿಯಂತ್ರಿಸುವ ಉದ್ದೇಶದಿಂದ ಸಾರ್ವಜನಿಕ ಸ್ಥಳಗಳಿಂದ ಹತ್ತಕ್ಕಿಂತ ಅಧಿಕ ಮಂದಿ ಸೇರಬೇಕೆಂದರೆ ಪೊಲೀಸರ ಪೂರ್ವಾನುಮತಿ ಕಡ್ಡಾಯಗೊಳಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದ್ದ ಬೆನ್ನಧಿಲ್ಲೇ ಇದೀಗ ಕೆಎಟಿ ಆದೇಶದಿಂದ ಸರಕಾರಕ್ಕೆ ಮುಖಭಂಗವಾಗಿದೆ. ಪ್ರವೀಣ್ ಕುಮಾರ್ ಅಮಾನತು ಸರಕಾರ ಮತ್ತು ಪ್ರತಿಪಕ್ಷ ಬಿಜೆಪಿ ನಡುವೆ ವಾಗ್ವಾದಕ್ಕೆ ಕಾರಣವಾಗಿತ್ತು. ತಮ್ಮನ್ನು ಅಮಾನತುಗೊಳಿಸಿರುವ ಸರಕಾರದ ಆದೇಶ ಪ್ರಶ್ನಿಸಿ ಪ್ರವೀಣ್ ಕುಮಾರ್ ಕೆಎಟಿ ಮೆಟ್ಟಿಲೇರಿದ್ದರು.

ಸಂಬಂಧಿತ ಸುದ್ದಿ

Kannada News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ