ರಾಜ್ಯೋತ್ಸವ ಪ್ರಶಸ್ತಿಗೆ 10 ಸಾಧಕರ ಆಯ್ಕೆ

Contributed byphalalochanaradhya.ks@timesofindia.com|Vijaya Karnataka
Subscribe

ಚಾಮರಾಜನಗರ ಜಿಲ್ಲೆಯಲ್ಲಿ ರಾಜ್ಯೋತ್ಸವ ಪ್ರಶಸ್ತಿಗಾಗಿ 10 ಸಾಧಕರನ್ನು ಆಯ್ಕೆ ಮಾಡಲಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಇವರಿಗೆ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನ ನಡೆಯಲಿದೆ. ಜಿಲ್ಲಾಡಳಿತದಿಂದ ನ.1ರಂದು ಬೆಳಿಗ್ಗೆ 9ಕ್ಕೆ ಪೊಲೀಸ್ ಕವಾಯತು ಮೈದಾನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸುವರು.

10 achievers selected for state festival award

ವಿಕ ಸುದ್ದಿಲೋಕ ಚಾಮರಾಜನಗರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಜಿಲ್ಲಾಮಟ್ಟದಲ್ಲೂಘೋಷಣೆ ಮಾಡಲಾಗಿದ್ದು, ಜಿಲ್ಲೆಯ ನಾನಾ ಕ್ಷೇತ್ರಗಳಲ್ಲಿಸಾಧನೆ ಮಾಡಿರುವ 10 ಸಾಧಕರನ್ನು ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಶಿಲ್ಪಾ ಕಲಾಕೃತಿ ವಿಭಾಗದಲ್ಲಿಮಂಗಲ ಮಧುಸೂದನ್ , ಸಾಹಿತ್ಯ ಕ್ಷೇತ್ರದಲ್ಲಿಡಾ.ಕೃಷ್ಣಮೂರ್ತಿ ಚಮರಂ, ಜಾನಪದ ಕ್ಷೇತ್ರದಿಂದ ಕೆಲ್ಲಂಬಳ್ಳಿ ರಾಮಣ್ಣ, ರಂಗಭೂಮಿಯಿಂದ ಚಾ.ನಗರ ಪಟ್ಟಣದ ಗಾಳೀಪುರದ ವೆಂಕಟರಮಣಸ್ವಾಮಿ, ಸಾಹಿತ್ಯ , ಸಮಾಜ ಸೇವೆಯಲ್ಲಿಅಂಕನಶೆಟ್ಟಿಪುರದ ಸಿ.ಶಂಕರ್ , ಸಮಾಜ ಸೇವಾ ಕ್ಷೇತ್ರದಿಂದ ಬಿಳಿಗಿರಿರಂಗನಬೆಟ್ಟದ ಸಿ.ಮಾದೇಗೌಡ, ಪತ್ರಿಕೋದ್ಯಮದಿಂದ ಯಳಂದೂರು ಪಟ್ಟಣದ ನಂದೀಶ್ , ಭರತನಾಟ್ಯ ಕ್ಷೇತ್ರದಿಂದ ಅಕ್ಷತಾ ಜೈನ್ , ನಾಟಿ ಔಷಧಕ್ಕಾಗಿ ಹೆಗ್ಗವಾಡಿಪುರ ಮಹೇಶಕುಮಾರ್ ಹಾಗೂ ಜಾನಪದ, ಕಲಾ ಸೇವೆ ಕ್ಷೇತ್ರದಿಂದ ರಾಮಸಮುದ್ರದ ತುಳಸಮ್ಮ ಅವರು ಜಿಲ್ಲಾಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ರಾಜ್ಯೋತ್ಸವ ಪ್ರಶಸ್ತಿಗಾಗಿ 50ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ಪೈಕಿ 10 ಮಂದಿಯನ್ನು ಆಯ್ಕೆ ಸಮಿತಿ ಹೆಸರಿಸಿದೆ. ಇವರಿಗೆ ನ.1ರಂದು ನಗರದಲ್ಲಿನಡೆಯಲಿರುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿಸನ್ಮಾನಿಸಲಾಗುವುದು. ಇಂದು ರಾಜ್ಯೋತ್ಸವ ಕಾರ್ಯಕ್ರಮ ಜಿಲ್ಲಾಡಳಿತದ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮವನ್ನು ನ.1ರಂದು ಬೆಳಗ್ಗೆ 9ಕ್ಕೆ ನಗರದ ಜಿಲ್ಲಾಪೊಲೀಸ್ ಕವಾಯತು ಮೈದಾನದಲ್ಲಿಹಮ್ಮಿಕೊಳ್ಳಲಾಗಿದೆ. ಜಿಲ್ಲಾಉಸ್ತುವಾರಿ ಸಚಿವ ಕೆ.ವೆಂಕಟೇಶ್ ಧ್ವಜಾರೋಹಣ ನೆರವೇರಿಸಿ ಬಳಿಕ ರಾಜ್ಯೋತ್ಸವದ ಸಂದೇಶ ನೀಡುವರು. ಶಾಸಕ ಸಿ ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಸಂಸದ ಸುನೀಲ್ ಬೋಸ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಶಾಸಕರಾದ ಎ.ಆರ್ . ಕೃಷ್ಣಮೂರ್ತಿ, ಎಚ್ .ಎಂ.ಗಣೇಶ್ ಪ್ರಸಾದ್ , ಎಂ.ಆರ್ .ಮಂಜುನಾಥ್ , ಡಾ.ಡಿ.ತಿಮ್ಮಯ್ಯ, ಸಿ.ಎನ್ .ಮಂಜೇಗೌಡ, ಮಧು ಜಿ. ಮಾದೇಗೌಡ, ಕೆ.ವಿವೇಕಾನಂದ, ಕಾಡ ಅದ್ಯಕ್ಷ ಪಿ.ಮರಿಸ್ವಾಮಿ, ನಗರಸಭೆ ಅಧ್ಯಕ್ಷ ಎಸ್ .ಸುರೇಶ್ , ಚುಡ ಅಧ್ಯಕ್ಷ ಮಹಮ್ಮದ್ ಅಸ್ಗರ್ (ಮುನ್ನ), ಜಿಲ್ಲಾಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷÃ ಎಚ್ .ವಿ.ಚಂದ್ರು, ನಗರಸಭೆ ಉಪಾಧ್ಯಕ್ಷೆ ಮಮತಾ, ಸದಸ್ಯರಾದ ಲೋಕೇಶ್ವರಿ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

ಸಂಬಂಧಿತ ಸುದ್ದಿ

Kannada News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ