ಇಂದು ಸಾವಿರ ವಿದ್ಯಾರ್ಥಿಗಳಿಂದ ನಾಡಗೀತೆ ಗಾಯನ

Contributed byadarshkodi15@gmail.com|Vijaya Karnataka
Subscribe

ನಾಡಗೀತೆಗೆ ನೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ, ನ.1ರಂದು ಡಾ.ರಾಜ್‌ಕುಮಾರ್‌ ಪ್ರತಿಮೆ ಮುಂಭಾಗ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ನಗರದ ನಾನಾ ಶಾಲೆಗಳ ಸಾವಿರ ವಿದ್ಯಾರ್ಥಿಗಳು ನಾಡಗೀತೆ ಹಾಡಲಿದ್ದಾರೆ. ಕುವೆಂಪು ರಚಿಸಿರುವ ಈ ಗೀತೆಗೆ 1960ರ ದಶಕದಲ್ಲಿ ಮೈಸೂರು ಅನಂತಸ್ವಾಮಿ ರಾಗ ನೀಡಿದ್ದರು. ಇದು ಕನ್ನಡಿಗರಲ್ಲಿ ಅಭಿಮಾನ ತುಂಬುತ್ತದೆ.

a grand performance of the state song by 1000 students

ಇಂದು ಸಾವಿರ ವಿದ್ಯಾರ್ಥಿಗಳಿಂದ ನಾಡಗೀತೆ ಗಾಯನ

((ನಾಡಗೀತೆಗೆ ಶತಮಾನ ಹಿನ್ನೆಲೆಯಲ್ಲಿಸಂಭ್ರಮಾಚರಣೆ))

ವಿಕ ಸುದ್ದಿಲೋಕ ದೊಡ್ಡಬಳ್ಳಾಪುರ

ಕುವೆಂಪು ರಚಿಸಿರುವ ನಾಡಗೀತೆಗೆ ನೂರು ವರ್ಷ ತುಂಬಿದ ಹಿನ್ನೆಲೆ ನ.1 ರಂದು ಡಾ.ರಾಜ್ ಕುಮಾರ್ ಪ್ರತಿಮೆ ಮುಂಭಾಗ ನಡೆಯುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿನಗರದ ನಾನಾ ಶಾಲೆಗಳ ಸಾವಿರ ವಿದ್ಯಾರ್ಥಿಗಳು ನಾಡಗೀತೆ ಹಾಡಲಿದ್ದಾರೆ ಎಂದು ಕಸಾಪ ತಾಲೂಕು ಅಧ್ಯಕ್ಷ ಗೋವಿಂದರಾಜು ತಿಳಿಸಿದರು.

ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿನಡೆದ ಪೂರ್ವ ಸಿದ್ಧತಾ ಕಾರ್ಯಕ್ರಮದಲ್ಲಿಮಾತನಾಡಿದ ಅವರು, ಕುವೆಂಪು ಅವರು 1924-25ರಲ್ಲಿನಾಡಗೀತೆ ಬರೆದಿದ್ದರು. 2004ರಲ್ಲಿಕುವೆಂಪು ಜನ್ಮ ಶತಮಾನೋತ್ಸವದ ಸಮಯದಲ್ಲಿಕರ್ನಾಟಕ ಸರಕಾರ ಈ ಗೀತೆಯನ್ನು ಅಧಿಕೃತವಾಗಿ ನಾಡ ಗೀತೆಯನ್ನಾಗಿಸಿ, ಅದಕ್ಕೊಂದು ವಿಶೇಷ ಸ್ಥಾನ ನೀಡಿತು. ಶಾಲೆಗಳಲ್ಲಿತರಗತಿಗಳು ಪ್ರಾರಂಭವಾಗುವ ಮೊದಲು ಪ್ರತಿದಿನ ಹಾಡಬೇಕು ಮತ್ತು ಎಲ್ಲಾಕಾರ್ಯಕ್ರಮಗಳಲ್ಲಿಯೂ ಸಹ ಹಾಡಬೇಕು ಎಂದು ಅದು ನಿರ್ದೇಶಿಸಿತು ಎಂದು ವಿವರಿಸಿದರು.

ಕುವೆಂಪು ಅವರು ರಚಿಸಿರುವ ನಾಡಗೀತೆಗೆ ಗಾಯಕ ಮೈಸೂರು ಅನಂತಸ್ವಾಮಿ ಅವರು 1960ರ ದಶಕದಲ್ಲಿಒಂದು ರಾಗವನ್ನು ನೀಡಿದರು. ಮೈಸೂರಿನ ಮಹಾರಾಜ ಕಾಲೇಜಿನಲ್ಲಿಕುವೆಂಪು ಅವರ ಸಮ್ಮುಖದಲ್ಲಿಅನಂತಸ್ವಾಮಿ ಕೂಡ ಇದನ್ನು ಹಾಡಿದ್ದರು. ಕರ್ನಾಟಕವನ್ನು ಭಾರತಮಾತೆಯ ಮಗಳು ಎಂದು ಬಣ್ಣಿಸುತ್ತದೆ. ಇದು ಕನ್ನಡಿಗರಲ್ಲಿಅಭಿಮಾನ ಮತ್ತು ಸ್ಫೂರ್ತಿಯನ್ನು ತುಂಬುವ ಮೂಲಕ ನಾಡಿನ ಘನತೆಯನ್ನು ಸಾರುತ್ತದೆ ಎಂದು ತಿಳಿಸಿದರು.

ಈ ವೇಳೆ ಕಸಾಪ ಪದಾಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.

ಫೋಟೋ:31ವಿಕೆ3: ದೊಡ್ಡಬಳ್ಳಾಪುರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿನಡೆದ ಪೂರ್ವ ಸಿದ್ಧತಾ ಕಾರ್ಯಕ್ರಮದಲ್ಲಿವಿದ್ಯಾರ್ಥಿಗಳು ನಾಡಗೀತೆ ಹಾಡಿದರು.

ಸಂಬಂಧಿತ ಸುದ್ದಿ

Kannada News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ