ರಸಗೊಬ್ಬರ ಮಳಿಗೆಗಳಿಗೆ ಅಧಿಕಾರಿಗಳ ಭೇಟಿ

Contributed byshankardp123@gmail.com|Vijaya Karnataka
Subscribe

ಯಳಂದೂರು ಪಟ್ಟಣದ ಖಾಸಗಿ ರಸಗೊಬ್ಬರ ಮತ್ತು ಕೀಟನಾಶಕ ಮಾರಾಟ ಮಳಿಗೆಗಳಿಗೆ ಜಿಲ್ಲಾ ಕೃಷಿ ಇಲಾಖೆ ಉಪ ನಿರ್ದೇಶಕರು ಭೇಟಿ ನೀಡಿದರು. ರೈತರಿಗೆ ನಿಗದಿತ ದರದಲ್ಲಿ ರಸಗೊಬ್ಬರ ಮತ್ತು ಕೀಟನಾಶಕ ನೀಡಬೇಕು. ದರಪಟ್ಟಿ ಪ್ರಕಟಿಸಬೇಕು. ರೈತರು ಕೇಳಿದ ಗೊಬ್ಬರ ನೀಡಬೇಕು. ಗುಣಮಟ್ಟದ ಬಿತ್ತನೆ ಬೀಜ, ರಸಗೊಬ್ಬರ ಮಾರಾಟ ಮಾಡದಿದ್ದರೆ ಪರವಾನಗಿ ರದ್ದುಪಡಿಸಲಾಗುವುದು ಎಂದು ಅಂಗಡಿ ಮಾಲೀಕರಿಗೆ ಎಚ್ಚರಿಕೆ ನೀಡಲಾಯಿತು.

agricultural department report on fertilizer shops

ಯಳಂದೂರು: ಪಟ್ಟಣದ ಖಾಸಗಿ ರಸಗೊಬ್ಬರ ಕೀಟನಾಶಕ ಮಾರಾಟ ಮಳಿಗೆಗಳಿಗೆ ಜಿಲ್ಲಾ ಕೃಷಿ ಇಲಾಖೆ ಉಪ ನಿರ್ದೇಶಕರಾದ ಸುಷ್ಮಾ ಅವರು ಭೇಟಿ ನೀಡಿ ಪರಿಶೀಲಿಸಿದರು. ‘‘ನಿಗದಿತ ದರದಲ್ಲಿರೈತರಿಗೆ ರಸಗೊಬ್ಬರ, ಕೀಟನಾಶಕ ನೀಡಬೇಕು, ಮಾರಾಟದ ಬಗ್ಗೆ ದರಪಟ್ಟಿ ಪ್ರಕಟಿಸಬೇಕು, ರೈತರು ಕೇಳಿದ ಗೊಬ್ಬರವನ್ನು ನೀಡಬೇಕು, ಗುಣಮಟ್ಟದ ಬಿತ್ತನೆ ಬೀಜ, ರಸ ಗೊಬ್ಬರ ಮಾರಾಟ ಮಾಡದಿದ್ದರೆ ಪರವಾನಗಿಯನ್ನು ರದ್ದುಪಡಿಸುವುದಾಗಿ,’’ ಅಂಗಡಿ ಮಾಲೀಕರಿಗೆ ಎಚ್ಚರಿಕೆ ನೀಡಿದರು. ಜಾಗೃತಿ ತನಿಖಾ ತಂಡದ ಅಧಿಕಾರಿ ರಮೇಶ್ , ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಅಮೃತೇಶ್ , ಕೃಷಿ ಅಧಿಕಾರಿ ವೆಂಕಟರಂಗಶೆಟ್ಟಿ ಇದ್ದರು.

ಸಂಬಂಧಿತ ಸುದ್ದಿ

Kannada News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ