ಬಂಗಾರಪ್ಪ ನೀಡಿದ ಯೋಜನೆಗಳು ಸದಾ ಜೀವಂತ

Contributed bysamanee18@gmail.com|Vijaya Karnataka
Subscribe

ಸೊರಬದ ಬಂಗಾರಧಾಮಕ್ಕೆ ಭೇಟಿ ನೀಡಿದ ಶಾಸಕ ಎ.ಆರ್‌.ಕೃಷ್ಣಮೂರ್ತಿ ಅವರು ಮಾಜಿ ಮುಖ್ಯಮಂತ್ರಿ ಎಸ್‌.ಬಂಗಾರಪ್ಪ ಅವರ ಕೊಡುಗೆಗಳು ಸದಾ ಜೀವಂತವಾಗಿವೆ ಎಂದರು. ಬಂಗಾರಪ್ಪನವರು ಜಾರಿಗೆ ತಂದ ಜನಪರ ಕಾರ್ಯಕ್ರಮಗಳು ಇಂದಿಗೂ ಜನಮಾನಸದಲ್ಲಿವೆ. ಅವರು ಉತ್ತಮ ಕ್ರೀಡಾಪಟುವಾಗಿದ್ದು, ಸದೃಢ ಆರೋಗ್ಯ ಹೊಂದಿದ್ದರು. ಈ ಸಂದರ್ಭ ಹಲವು ಮುಖಂಡರು ಉಪಸ್ಥಿತರಿದ್ದರು.

ar krishna murthy honors bangarappas contributions

ಬಂಗಾರಪ್ಪ ನೀಡಿದ ಯೋಜನೆಗಳು ಸದಾ ಜೀವಂತ

ವಿಕ ಸುದ್ದಿಲೋಕ ಸೊರಬ

ಮಾಜಿ ಮುಖ್ಯಮಂತ್ರಿ ಎಸ್ .ಬಂಗಾರಪ್ಪ ಅವರು ರಾಜ್ಯಕ್ಕೆ ಅವರು ನೀಡಿದ ಕೊಡುಗೆ ಸದಾ ಜೀವಂತ ಎಂದು ವಿಧಾನಸಭೆ ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ಅಧ್ಯಕ್ಷ ಹಾಗೂ ಕೊಳ್ಳೆಗಾಲ ಶಾಸಕ ಎ.ಆರ್ .ಕೃಷ್ಣಮೂರ್ತಿ ಹೇಳಿದರು.

ಪಟ್ಟಣದ ಬಂಗಾರಧಾಮಕ್ಕೆ ಗುರುವಾರ ಭೇಟಿ ನೀಡಿ ಬಂಗಾರಪ್ಪ ಸಮಾಧಿಗೆ ಮಾಲಾರ್ಪಣೆ ಮಾಡಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ,

ಮಾಜಿ ಮುಖ್ಯಮಂತ್ರಿ ಎಸ್ .ಬಂಗಾರಪ್ಪನವರು ತಮ್ಮ ಅಧಿಕಾರವಧಿಯಲ್ಲಿಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದಲ್ಲದೆ ಇಂದಿಗೂ ಅವು ಜನಮಾನಸದಲ್ಲಿಉಳಿದಿವೆ. ಬಂಗಾರಪ್ಪನವರು ಉತ್ತಮ ಕ್ರೀಡಾಪಟು ಆಗಿರುವ ಜತೆಗೆ ಸದೃಢ ಆರೋಗ್ಯ ಹೊಂದಿ ರಾಜಕಾರಣಿಗಳಿಗೆ ಮಾದರಿಯಾಗಿದ್ದರು ಎಂದರು.

ಈ ಸಂದರ್ಭ ಸೊರಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಣ್ಣಪ್ಪ ಹಾಲಘಟ್ಟ, ಆನವಟ್ಟಿ ಬ್ಲಾಕ್ ಅಧ್ಯಕ್ಷ ಸದಾನಂದಗೌಡ ಬಿಳಗಲಿ, ತಾ.ಪಂ. ಮಾಜಿ ಅಧ್ಯಕ್ಷ ಗಣಪತಿ ಹುಲ್ತಿಕೊಪ್ಪ, ಬಗರ್ ಹುಕುಂ ಸಮಿತಿ ಅಧ್ಯಕ್ಷ ಎಂ.ಡಿ.ಶೇಖರ್ , ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಜಯಶೀಲಗೌಡ ಅಂಕರವಳ್ಳಿ ಮತ್ತಿತರರು ಹಾಜರಿದ್ದರು.

30ಸೊರಬಪಿ1:

ಸೊರಬ ಬಂಗಾರಧಾಮಕ್ಕೆ ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ಅಧ್ಯಕ್ಷ ಎ.ಆರ್ .ಕೃಷ್ಣಮೂರ್ತಿ ಭೇಟಿ ನೀಡಿ ಪುಷ್ಪನಮನ ಸಲ್ಲಿಸಿದರು.

ಸಂಬಂಧಿತ ಸುದ್ದಿ

Kannada News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ