ಕಾಂಗ್ರೆಸ್ ನಿಂದಲೇ ಹಿಂದುಳಿದ ವರ್ಗದ ಸಿಎಂ

Contributed byshankardp123@gmail.com|Vijaya Karnataka
Subscribe

ರಾಜ್ಯದಲ್ಲಿ ಹಿಂದುಳಿದ ವರ್ಗದ ಹಲವು ನಾಯಕರನ್ನು ಮುಖ್ಯಮಂತ್ರಿಯನ್ನಾಗಿ ಕಾಂಗ್ರೆಸ್ ಪಕ್ಷ ಮಾಡಿದೆ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ತಿಳಿಸಿದರು. ಒಬಿಸಿ ಸಮುದಾಯಕ್ಕೆ ಕಾಂಗ್ರೆಸ್ ಹಲವು ಯೋಜನೆಗಳನ್ನು ರೂಪಿಸಿದೆ. ಬಿಜೆಪಿ ಒಬಿಸಿ ಸಮುದಾಯಕ್ಕೆ ಯಾವುದೇ ಕೊಡುಗೆ ನೀಡಿಲ್ಲ ಎಂದು ಅವರು ಹೇಳಿದರು. ಅಂಬೇಡ್ಕರ್ ಸಂವಿಧಾನವನ್ನು ಕಾಂಗ್ರೆಸ್ ಉಳಿಸುತ್ತಿದೆ ಎಂದರು.

chief minister madhu bangarappa of backward class from congress

ವಿಕ ಸುದ್ದಿಲೋಕ ಯಳಂದೂರು ಹಿಂದುಳಿದ ವರ್ಗಗಳ ಹಲವು ನಾಯಕರನ್ನು ರಾಜ್ಯದಲ್ಲಿಕಾಂಗ್ರೆಸ್ ಮುಖ್ಯಮಂತ್ರಿಯನ್ನಾಗಿ ಮಾಡಿದ ಪಕ್ಷವಾಗಿದೆ. ಒಬಿಸಿ ಕಾಂಗ್ರೆಸ್ ನÜ ಬ್ಯಾಕ್ ಬೋನ್ ಆಗಿದೆ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಅಭಿಪ್ರಾಯಪಟ್ಟರು. ಪಟ್ಟಣದ ಅಂಬೇಡ್ಕರ್ ಭವನದಲ್ಲಿಶುಕ್ರವಾರ ಕೊಳ್ಳೇಗಾಲ ಮೀಸಲು ವಿಧಾನಸಭಾ ಕ್ಷೇತ್ರದ ಕೊಳ್ಳೇಗಾಲ ಮತ್ತು ಯಳಂದೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ವತಿಯಿಂದ ಆಯೋಜಿಸಿದ್ದ ವಾಯ್ ್ಸ ಆಫ್ ಒಬಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತಾನಾಡಿದರು. ‘‘ದೇಶದಲ್ಲಿಒಬಿಸಿ ಸಮುದಾಯ ಸುಮಾರು ಶೇ.55 ಇದೆ. ಇವರ ಸಮಸ್ಯೆಗಳನ್ನು ಹಾಗೂ ಈ ಸಮುದಾಯಗಳ ಪರವಾಗಿ ಕಾಂಗ್ರೆಸ್ ಹಲವು ಯೋಜನೆಗಳನ್ನು ರೂಪಿಸಿದೆ. ಬಿಜೆಪಿಯು ಒಬಿಸಿ ಸಮುದಾಯಕ್ಕೆ ಯಾವ ಕೊಡುಗೆಯನ್ನೂ ನೀಡಿಲ್ಲ,’’ ಎಂದು ಆಕ್ರೋಶ ಹೊರಹಾಕಿದರು. ‘‘ಕಾಂಗ್ರೆಸ್ ಹಿಂದುಳಿದ ಒಬಿಸಿ ಸಮುದಾಯದ ಬಂಗಾರಪ್ಪ, ಧರ್ಮಸಿಂಗ್ , ದೇವರಾಜ ಅರಸು, ವೀರಪ್ಪಮೊಯ್ಲಿಹಾಗೂ ಸಿದ್ದರಾಮಯ್ಯ ಅವರಂತಹ ನಾಯಕರನ್ನು ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡಿದೆ. ಬಿಜೆಪಿ ಯಾವ ಅಧಿಕಾರವನ್ನೂ ಒಬಿಸಿ ಸಮುದಾಯಗಳಿಗೆ ನೀಡಿಲ್ಲ, ಜನರನ್ನು ದಿಕ್ಕುತಪ್ಪಿಸುತ್ತಿದ್ದಾರೆ,’’ ಎಂದು ದೂರಿದರು. ‘‘ಅಂಬೇಡ್ಕರ್ ಬರೆದ ಸಂವಿಧಾನವನ್ನು ಕಾಂಗ್ರೆಸ್ ಉಳಿಸುವ ಕೆಲಸ ಮಾಡುತ್ತಿದೆ. ಅಂಬೇಡ್ಕರ್ ಅವರ ಸಂವಿಧಾನವಿಲ್ಲದಿದ್ದರೆ ಒಬಿಸಿ ಸಮುದಾಯಗಳ ಅಭಿವೃದ್ಧಿಯಾಗುತ್ತಿರಲಿಲ್ಲ. ನಾವೆಲ್ಲಇಂದು ಉನ್ನತ ಸ್ಥಾನಮಾನದಲ್ಲಿದ್ದೇವೆ ಎಂದರೆ ಅದು ಸಂವಿಧಾನದಿಂದ ಎಂದು ಹೆಮ್ಮೆಯಿಂದ ಹೇಳುತ್ತೇನೆ,’’ ಎಂದರು. ‘‘ದೇಶದ ಸಂವಿಧಾನವನ್ನು ಒಪ್ಪಿಕೊಳ್ಳದ ಆರ್ .ಎಸ್ .ಎಸ್ ನ ಅವಶ್ಯಕತೆ ನಮಗಿಲ್ಲ. ಸಂವಿಧಾನವನ್ನು ಉಳಿಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಪಂಚ ಗ್ಯಾರಂಟಿಯಿಂದಾಗಿ ಬಡತನ ಬದುಕು ಹಸನುಗೊಳ್ಳುತ್ತಿದೆ. ಅಷ್ಟೇ ಅಲ್ಲಬಿಜೆಪಿಯ ಕಾರ್ಯಕರ್ತರು ಸಹ ಗ್ಯಾರಂಟಿ ಯೋಜನೆ ಪಡೆದುಕೊಳ್ಳುತ್ತಿದ್ದಾರೆ. ನಾನು ಶಿಕ್ಷಣ ಸಚಿವನಾದ ಮೇಲೆ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಲು ಮೂರು ಪರೀಕ್ಷೆಗಳನ್ನು ಹೊಸದಾಗಿ ತಂದಿದ್ದೇನೆ, ಇದರ ಪರಿಣಾಮ ಪರೀಕ್ಷೆಯಲ್ಲಿಫೇಲ್ ಆಗಿ ಶಿಕ್ಷಣದಿಂದ ವಂಚಿತರಾಗುತ್ತಿದ್ದ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ,’’ ಎಂದು ಹೇಳಿದರು. ಎಂಎಲ್ ಸಿ ಡಾ.ತಿಮ್ಮಯ್ಯ, ಕೊಳ್ಳೇಗಾಲದ ಶಾಸಕ ಎ.ಆರ್ .ಕೃಷ್ಣಮೂರ್ತಿ, ಮಾಜಿ ಸಭಾಪತಿ ವಿ.ಆರ್ .ಸುದರ್ಶನ್ , ಕಾಡಾ ಅಧ್ಯಕ್ಷ ಹಾಗೂ ಬ್ಲಾಕ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮರಿಸ್ವಾಮಿ, ಜಿಲ್ಲಾಗ್ಯಾರಂಟಿ ಯೋಜನೆಯ ಅಧ್ಯಕ್ಷ ಎಚ್ .ವಿ.ಚಂದ್ರು, ಮಾಜಿ ಶಾಸಕ ಜಿ.ಎನ್ ನಂಜುಂಡಸ್ವಾಮಿ, ಒಬಿಸಿ ವಿಭಾಗದ ಜಿಲ್ಲಾದ್ಯಕ್ಷ ಚೇತನ್ ಕುಮಾರ್ ಹಾಗೂ ಕಾಂಗ್ರೆಸ್ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಹಾಜರಿದ್ದರು.

ಸಂಬಂಧಿತ ಸುದ್ದಿ

Kannada News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ