ಎನ್ ಎಸ್ ಎಸ್ ನಿಂದ ಸಾಮಾಜಿಕ ಜವಾಬ್ದಾರಿ ವೃದ್ಧಿ

Contributed bynews.raviraja18@gmail.com|Vijaya Karnataka
Subscribe

ಹೊಸನಗರದ ಕೊಡಚಾದ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್‌ಎಸ್‌ಎಸ್‌ ಘಟಕವು ಸರಕಾರಿ ಪ್ರೌಢಶಾಲೆಯಲ್ಲಿ ಒಂದು ದಿನ ಸೇವಾ ಶಿಬಿರವನ್ನು ಹಮ್ಮಿಕೊಂಡಿತ್ತು. ಈ ಶಿಬಿರದಲ್ಲಿ ವಿದ್ಯಾರ್ಥಿಗಳು ಕಾಲೇಜಿನ ಗೋಡೆಗಳಿಗೆ ಸುಣ್ಣ ಬಣ್ಣ ಬಳಿದು, ಉದ್ಯಾನವನ ನಿರ್ಮಾಣ ಮತ್ತು ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡರು. ಎನ್‌ಎಸ್‌ಎಸ್‌ ಯೋಜನೆಯು ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ, ನಾಯಕತ್ವದ ಗುಣ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳನ್ನು ಬೆಳೆಸುತ್ತದೆ.

enhancing social responsibility among students through nss

ಎನ್ ಎಸ್ ಎಸ್ ನಿಂದ ಸಾಮಾಜಿಕ ಜವಾಬ್ದಾರಿ ವೃದ್ಧಿ

ವಿಕ ಸುದ್ದಿಲೋಕ ಹೊಸನಗರ

ರಾಷ್ಟ್ರೀಯ ಸ್ವಯಂ ಸೇವಾ ಯೋಜನೆಯು ಸಮುದಾಯದೊಂದಿಗೆ ಸಂಬಂಧವನ್ನು ಅರ್ಥಮಾಡಿಕೊಳ್ಳಲು ಮತ್ತು ಅವರ ಅಗತ್ಯತೆಗಳನ್ನು ಅರಿಯಲು ವಿದ್ಯಾರ್ಥಿಗಳಿಗೆ ಸಹಾಯ ಮಾಡುತ್ತದೆ ಎಂದು ಕೊಡಚಾದ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಉಮೇಶ್ ತಿಳಿಸಿದರು.

ಪಟ್ಟಣದ ಸರಕಾರಿ ಪ್ರೌಢಶಾಲೆಯಲ್ಲಿಶುಕ್ರವಾರ ಕೊಡಚಾದ್ರಿ ಕಾಲೇಜಿನ ಎನ್ ಎಸ್ ಎಸ್ ಘಟಕ 1 ಮತ್ತು 2 ಹಮ್ಮಿಕೊಂಡಿದ್ದ ಒಂದು ದಿನ ಸೇವಾ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ವಿದ್ಯಾರ್ಥಿ ಸಮುದಾಯಕ್ಕೆ ಸಾಮಾಜಿಕ ಮತ್ತು ನಾಗರಿಕ ಜವಾಬ್ದಾರಿಯ ಪ್ರಜ್ಞೆಯನ್ನು ಬೆಳೆಸಿಕೊಳ್ಳಲು ಯೋಜನೆ ಅವಕಾಶ ಕಲ್ಪಿಸುತ್ತದೆ. ನಾಯಕತ್ವದ ಗುಣ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳನ್ನು ಬೆಳೆಸುತ್ತದೆ. ಅಲ್ಲದೇ ತುರ್ತು ಪರಿಸ್ಥಿತಿಗಳು ಮತ್ತು ಪ್ರಕೃತಿ ವಿಕೋಪಗಳನ್ನು ಎದುರಿಸಲು ಸಿದ್ಧಪಡಿಸುತ್ತದೆ. ಹಾಗಾಗಿ, ವಿದ್ಯಾರ್ಥಿಗಳು ಶಿಬಿರದಲ್ಲಿತಪ್ಪದೇ ಪಾಲ್ಗೊಳ್ಳಬೇಕೆಂದರು.

ಯೋಜನೆಯ ಕಾರ ್ಯಕ್ರಮಾಧಿಕಾರಿಗಳಾದ ಕೆ.ಎಸ್ .ಮೇದಿನಿ, ರಾಕೇಶ್ , ಪ್ರೌಢಶಾಲೆ ಮುಖ್ಯ ಶಿಕ್ಷಕ ರೇಣುಕೇಶ್ , ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ಕೆ.ಅಶ್ವಿನಿಕುಮಾರ್ , ಐಕ್ಯೂಎಸಿ ಸಂಚಾಲಕ ಡಿ.ಮಂಜುನಾಥ್ ಸೇರಿದಂತೆ ಕಾಲೇಜು ಸಿಬ್ಬಂದಿ ಉಪಸ್ಥಿತರಿದ್ದರು.

ಶಿಬಿರಾರ್ಥಿಗಳು ಕಾಲೇಜಿನ ಗೋಡೆಗಳಿಗೆ ಸುಣ್ಣ ಬಣ್ಣ ಬಳಿದು, ಉದ್ಯಾನವನ ನಿರ್ಮಾಣ, ಸ್ವಚ್ಛತಾ ಕಾರ್ಯ ಕೈಗೊಂಡರು.

ಚಿತ್ರ:

31ಎಚ್ ಒಎಸ್ ಪಿ2:

ಹೊಸನಗರದ ಕೊಡಚಾದ್ರಿ ಕಾಲೇಜಿನ ಎನ್ ಎಸ್ ಎಸ್ ಶಿಬಿರವು ಪಟ್ಟಣದ ಸರಕಾರಿ ಪ್ರೌಢಶಾಲಾ ಆವರಣದಲ್ಲಿನಡೆಯಿತು.

ಸಂಬಂಧಿತ ಸುದ್ದಿ

Kannada News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ