ಪೊಲೀಸ್ ಇಲಾಖೆಯಿಂದ ಏಕತೆಗಾಗಿ ಓಟ

Contributed bygururaja.jd@gmail.com|Vijaya Karnataka
Subscribe

ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಸರ್ದಾರ್ ವಲ್ಲಭಭಾಯಿ ಪಟೇಲರ 150ನೇ ಜನ್ಮದಿನದ ಅಂಗವಾಗಿ 'ರನ್ ಫಾರ್ ಯೂನಿಟಿ' ಮ್ಯಾರಥಾನ್ ಆಯೋಜಿಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅವರು ಮ್ಯಾರಥಾನ್ ಗೆ ಚಾಲನೆ ನೀಡಿದರು. ಉತ್ತಮ ಕರ್ತವ್ಯ ನಿರ್ವಹಿಸಿದ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ ವಿತರಿಸಲಾಯಿತು. ರಾಷ್ಟ್ರೀಯ ಏಕತಾ ದಿನದ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲಾಯಿತು.

police departments unity run honoring 150th birth anniversary

ಪೊಲೀಸ್ ಇಲಾಖೆಯಿಂದ ಏಕತೆಗಾಗಿ ಓಟ

ವಿಕ ಸುದ್ದಿಲೋಕ ಶಿವಮೊಗ್ಗ

ದೇಶದ ಮಾಜಿ ಗೃಹಮಂತ್ರಿ ಸರ್ದಾರ್ ವಲ್ಲಭಬಾಯ್ ಪಟೇಲರ 150ನೇ ಜನ್ಮದಿನ ಅಂಗವಾಗಿ ಜಿಲ್ಲಾಪೊಲೀಸ್ ಇಲಾಖೆಯಿಂದ ಶುಕ್ರವಾರ ರನ್ ಫಾರ್ ಯೂನಿಟಿ ಮ್ಯಾರಾಥಾನ್ ನಡೆಸಲಾಯಿತು.

ಡಿಎಆರ್ ಪೊಲೀಸ್ ಕವಾಯತು ಮೈದಾನದಿಂದ ಆರಂಭವಾದ ಮ್ಯಾರಥಾನ್ ಗೆ ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಚಾಲನೆ ನೀಡುವ ಜತೆ ಭಾಗವಹಿಸಿದ್ದರು. ಅಶೋಕ ವೃತ್ತ, ಟಿ.ಸೀನಪ್ಪಶೆಟ್ಟಿ ವೃತ್ತ, ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ವೃತ್ತದ ಮೂಲಕ ಸಾಗಿದ ಮ್ಯಾರಥಾನ್ ಡಿಎಆರ್ ಮೈದಾನದಲ್ಲಿಮುಕ್ತಾಯವಾಯಿತು.

2025ನೇ ಸಾಲಿನಲ್ಲಿಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಬಂದೋಬಸ್ ್ತನಲ್ಲಿಉತ್ತಮವಾಗಿ ಕರ್ತವ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಪ್ರಶಂಸನಾ ಪತ್ರಗಳನ್ನು ಎಸ್ ಪಿ ಮಿಥುನ್ ಕುಮಾರ್ ವಿತರಿಸಿದರು. ಕಾರ್ಯಕ್ರಮದಲ್ಲಿರಾಷ್ಟ್ರೀಯ ಏಕತಾ ದಿನದ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ವಿವಿಧ ಠಾಣೆಗಳ ಸಿಬ್ಬಂದಿ ಇದ್ದರು.

=====

31ಎಸ್ ಎಂಜಿ29

ಶಿವಮೊಗ್ಗ ಪೊಲೀಸ್ ಇಲಾಖೆ ಆಯೋಜಿಸಿದ್ದ ರನ್ ಫಾರ್ ಯೂನಿಟಿ ಮ್ಯಾರಥಾನ್ ನಲ್ಲಿಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಭಾಗವಹಿಸಿದ್ದರು.

ಸಂಬಂಧಿತ ಸುದ್ದಿ

Kannada News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ