ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿಫಲಿಸಿದ ಕೈ ಕಾರ ್ಯತಂತ್ರ

Contributed bymaddurvk@gmail.com|Vijaya Karnataka
Subscribe

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಕಾರ್ಯತಂತ್ರ ಯಶಸ್ವಿಯಾಗಿದೆ. ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಿದ್ದಾರೆ. ಡಿ.ಸಿ.ಸಿ ಬ್ಯಾಂಕ್‌ಗೆ ನಿರ್ದೇಶಕರಾಗಿ ಆಯ್ಕೆಯಾದವರು ಸಚಿವರಿಗೆ ಅಭಿನಂದನೆ ಸಲ್ಲಿಸಿದರು. ಜಿಲ್ಲೆಯ ಅಭಿವೃದ್ಧಿ ಹಾಗೂ ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡುವ ಯೋಜನೆಗಳು ಜಾರಿಯಾಗಲಿವೆ. ಮುಂದಿನ ಚುನಾವಣೆಗಳಿಗೆ ಇದು ದಿಕ್ಸೂಚಿಯಾಗಲಿದೆ.

reasons for successful business in local body elections

ಡಿಸಿಸಿ ಬ್ಯಾಂಕ್ ನಿರ್ದೇಶಕರಿಂದ ಸಚಿವ ಸಿಆರ್ ಎಸ್ ಗೆ ಅಭಿನಂದನೆ

ವಿಕ ಸುದ್ಧಿಲೋಕ ಮದ್ದೂರು

ಜಿಲ್ಲೆಯಲ್ಲಿಕಾಂಗ್ರೆಸ್ ಸಂಘಟನೆ, ಬಲವರ್ಧನೆ ಜತೆಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿಪಕ್ಷದ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿಗೆಲುವು ಸಾಧಿಸಲು ಜಿಲ್ಲಾಉಸ್ತುವಾರಿ ಸಚಿವ ಎನ್ .ಚಲುವರಾಯಸ್ವಾಮಿಯವರ ಕಾರ್ಯತಂತ್ರಕ್ಕೆ ಉತ್ತಮ ಫಲಿತಾಂಶ ಲಭಿಸಿದೆ ಎಂದು ನಾಗಮಂಗಲ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್ .ದಿವಾಕರ್ ತಿಳಿಸಿದರು.

ಡಿ.ಸಿ.ಸಿ ಬ್ಯಾಂಕ್ ಗೆ ನಿರ್ದೇಶಕರಾಗಿ ಆಯ್ಕೆಯಾದವರು ಬೆಂಗಳೂರಿನಲ್ಲಿಜಿಲ್ಲಾಉಸ್ತುವಾರಿ ಸಚಿವ ಎನ್ .ಚಲುವರಾಯಸ್ವಾಮಿ ಅವರನ್ನು ಅಭಿನಂದಿಸಿ ಮಾತನಾಡಿದ ಅವರು,‘‘ಜಿಲ್ಲೆಯ ಸಮಗ್ರ ಅಭಿವೃದ್ಧಿ ಜತೆಗೆ ರೈತರ ಹತ್ತು ಹಲವು ಸಮಸ್ಯೆಗಳನ್ನು ಈಡೇರಿಸುವ ಮೂಲಕ ಜಿಲ್ಲೆಯಲ್ಲಿಶಾಶ್ವತ ಯೋಜನೆಗಳ ಕುರುಹುಗಳನ್ನು ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿಮತ್ತಷ್ಟು ಯೋಜನೆಗಳ ರೂವಾರಿಯಾಗಲಿದ್ದಾರೆ,’’ ಎಂದು ಬಣ್ಣಿಸಿದರು.

‘‘ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದಿನ ವಿಧಾನಸಭೆ ಮತ್ತು ತಾ.ಪಂ, ಜಿ.ಪಂ. ಚುನಾವಣೆಗಳ ದಿಕ್ಸೂಚಿಯಾಗಲಿದ್ದು , ಡಿ.ಸಿ.ಸಿ ಬ್ಯಾಂಕ್ ಅಧಿಕಾರದ ಚುಕ್ಕಾಣೆ ಹಿಡಿಯಲು ಪ್ರಮುಖ ಕಾರಣರಾಗಿರುವ ಚಲುವರಾಯಸ್ವಾಮಿ ಅವರು ಬ್ಯಾಂಕ್ ನ ಸರ್ವತೋಮುಖ ಅಭಿವೃದ್ಧಿಗೆ ಹಾಗೂ ರೈತಾಪಿ ವರ್ಗದ ಅನುಕೂಲಕ್ಕಾಗಿ ಸರಕಾರದಿಂದ ವಿಶೇಷ ಯೋಜನೆಗಳನ್ನು ಜಾರಿಗೆ ತರಲಿದ್ದಾರೆ,’’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಡಿ.ಸಿ.ಸಿ. ಬ್ಯಾಂಕ್ ನ ನೂತನ ನಿರ್ದೇಶಕರಾದ ಕೆ.ಸಿ.ಜೋಗಿಗೌಡ, ಪಿ.ಸಂದರ್ಶ, ಚಲುವರಾಜು, ಮನ್ ಮುಲ್ ನಿರ್ದೇಶಕ ಹರೀಶ್ ಬಾಬು ಇತರರಿದ್ದರು.

ಎಂಡಿವೈ31ಎಂಡಿಆರ್ 1ಸಿ

ಜಿಲ್ಲಾಉಸ್ತುವಾರಿ ಸಚಿವ ಎನ್ .ಚಲುವರಾಯಸ್ವಾಮಿ ಅವರನ್ನು ಡಿ.ಸಿ.ಸಿ ಬ್ಯಾಂಕ್ ನ ನೂತನ ನಿರ್ದೇಶಕರಾದ ಕೆ.ಸಿ.ಜೋಗಿಗೌಡ, ಪಿ.ಸಂದರ್ಶ, ಚಲುವರಾಜು ಹಾಗೂ ಮನ್ ಮುಲ್ ನಿರ್ದೇಶಕ ಹರೀಶ್ ಬಾಬು ಅಭಿನಂದಿಸಿದರು.

ಸಂಬಂಧಿತ ಸುದ್ದಿ

Kannada News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ