ಜಿಲ್ಲಾಡಳಿತದಿಂದ ಇಂದು ಅದ್ಧೂರಿ ರಾಜ್ಯೋತ್ಸವ

Contributed bynijaguni.dindalkoppa@timesofindia.com|Vijaya Karnataka
Subscribe

ಧಾರವಾಡದಲ್ಲಿ ನವೆಂಬರ್ 1ರಂದು ರಾಜ್ಯೋತ್ಸವ ಆಚರಣೆ ನಡೆಯಲಿದೆ. ಆರ್.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸುವರು. ಅಧಿಕಾರಿಗಳು, ಸಿಬ್ಬಂದಿ, ವಿದ್ಯಾರ್ಥಿಗಳು ಕಡ್ಡಾಯವಾಗಿ ಹಾಜರಾಗಬೇಕು. ಗೈರು ಹಾಜರಾದರೆ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

state festival in dharwad the state celebration will be held grandly

ವಿಕ ಸುದ್ದಿಲೋಕ ಧಾರವಾಡ

ಆರ್ .ಎನ್ .ಶೆಟ್ಟಿ ಕ್ರೀಡಾಂಗಣದಲ್ಲಿಜಿಲ್ಲಾಡಳಿತದಿಂದ ನವೆಂಬರ್ 1ರಂದು ಬೆಳಗ್ಗೆ 9ಕ್ಕೆ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸಲಾಗುವುದು.

ಜಿಲ್ಲಾಉಸ್ತುವಾರಿ ಸಚಿವರು ಧ್ವಜಾರೋಹಣ ಮಾಡಲಿದ್ದಾರೆ. ಜಿಲ್ಲೆಯ ಎಲ್ಲಜಿಲ್ಲಾಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಧಾರವಾಡ ಶಹರದ ಎಲ್ಲಸರಕಾರಿ, ಅನುದಾನಿತ, ಅನುದಾನರಹಿತ ಶಾಲೆ, ಕಾಲೇಜು, ಪದವಿ ಕಾಲೇಜು, ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು, ಶಿಕ್ಷಕರುಗಳು, ಬೋಧಕೇತರ ಅಧಿಕಾರಿ ಮತ್ತು ಸಿಬ್ಬಂದಿಯವರು ಬೆಳಿಗ್ಗೆ 8.30 ರೊಳಗಾಗಿ ಉಪಸ್ಥಿತರಿರುವರು.

ಕಾರ್ಯಕ್ರಮ ನಡೆಯುವ ಸ್ಥಳದಲ್ಲಿಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಹಾಜರಾತಿಯ ವ್ಯವಸ್ಥೆಯನ್ನು ಕಲ್ಪಸಲಾಗಿದ್ದು, ಹಾಜರಾತಿ ಸಿಬ್ಬಂದಿಯವರು ಇರುವ ಸ್ಥಳದಲ್ಲಿಎಲ್ಲಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿಯವರು ಕಡ್ಡಾಯವಾಗಿ ಹಾಜರಾತಿ ದಾಖಲಿಸುವುದು ಹಾಗೂ ಇದನ್ನು ಅತ್ಯಂತ ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ಸೂಚಿಸಿದೆ.

ಜಿಲ್ಲೆಯ ಎಲ್ಲಇಲಾಖೆಯ ಅಧಿಕಾರಿಗಳು, ಸಿಬ್ಬಂದಿ, ಶಾಲೆ, ಕಾಲೇಜು, ವಿಶ್ವವಿದ್ಯಾಲಯಗಳವರು ಯಾವುದೇ ಸಬೂಬು ಹೇಳದೇ ಕಟ್ಟುನಿಟ್ಟಾಗಿ ಪಾಲನೆ ಮಾಡುವದರ ಜತೆಗೆ ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಸೂಚಿಸಿದೆ. ಒಂದು ವೇಳೆ ಇದನ್ನು ಪಾಲನೆ ಮಾಡದೇ ನಿರ್ಲಕ್ಷ್ಯವಹಿಸಿದ್ದು ಕಂಡುಬಂದಲ್ಲಿಅಂತಹ ಅಧಿಕಾರಿ, ಸಿಬ್ಬಂದಿಗಳ ಮೇಲೆ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಸುತ್ತೋಲೆಯಲ್ಲಿತಿಳಿಸಿದ್ದಾರೆ.

ಸಂಬಂಧಿತ ಸುದ್ದಿ

Kannada News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ