ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ನೀಡಿ

Contributed bysukesh2365@gmail.com|Vijaya Karnataka
Subscribe

ರೈತ ಸಂಘದ ತಾಲೂಕಾಧ್ಯಕ್ಷ ಸಿ.ಎಂ. ಹೊಳೆ ಚಿರಂಜೀವಿ ಅವರು ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ಘೋಷಿಸಿ ಖರೀದಿ ಕೇಂದ್ರ ತೆರೆಯಲು ಒತ್ತಾಯಿಸಿದ್ದಾರೆ. ಕೂಲಿ ಬೆಲೆ ಹೆಚ್ಚಾಗಿದ್ದು, ಬೆಳೆಗಳ ಬೆಲೆ ಕುಸಿದಿದೆ. ಇದರಿಂದ ರೈತರು ಸಾಲದ ಹೊರೆ ಎದುರಿಸುತ್ತಿದ್ದಾರೆ. ವಿಮಾ ಕಂಪನಿಗಳ ಸರ್ವೆ ಕಾರ್ಯದಲ್ಲಿ ಲೋಪಗಳಾಗಿದ್ದು, ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ರೈತರ ಬಗ್ಗೆ ಕಾಳಜಿ ತೋರುತ್ತಿಲ್ಲ ಎಂದು ಆರೋಪಿಸಿದ್ದಾರೆ.

support price for maize farmers are falling into debt

ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ನೀಡಿ

ಜಗಳೂರು: ಮೆಕ್ಕೆಜೋಳ ಬೆಳೆಗೆ ಸರಕಾರ ಬೆಂಬಲ ಬೆಲೆ ಘೋಷಣೆ ಮಾಡಿದ್ದು, ಖರೀದಿ ಕೇಂದ್ರ ತೆರೆಯಬೇಕು ಎಂದು ರೈತ ಸಂಘದ ತಾಲೂಕಾಧ್ಯಕ್ಷ ಸಿ.ಎಂ. ಹೊಳೆ ಚಿರಂಜೀವಿ ಒತ್ತಾಯಿಸಿದರು.

ಪಟ್ಟಣದಲ್ಲಿಗುರುವಾರ ಸುದ್ದಿಗೋಷ್ಠಿಯಲ್ಲಿಮಾತನಾಡಿ, ಕೂಲಿ ಬೆಲೆ ದುಬಾರಿಯಾಗಿದೆ. ಆದರೆ ಬೆಳೆಗಳ ಬೆಲೆ ಕುಸಿದಿದೆ. ಇದರಿಂದ ರೈತರಿಗೆ ಸಾಲದ ಹೊರೆ ಹೆಚ್ಚಾಗುತ್ತಿದೆ. ತಕ್ಷಣವೇ ಸರಕಾರ ರೈತರಿಗೆ ಅನುಕೂಲವಾದ ಯೋಜನೆ ಜಾರಿಗೊಳಿಸಬೇಕು. ಉತ್ತಮ ಬೆಲೆ ನೀಡಬೇಕು ಎಂದು ಮನವಿ ಮಾಡಿದರು.

ರೈತ ಸಂಘದ ಪ್ರಧಾನ ಕಾರ್ಯದರ್ಶಿ ಬೈರನಾಯಕನಹಳ್ಳಿ ರಾಜು ಮಾತನಾಡಿ, ಸರಕಾರ ಮತ್ತು ತಾಲೂಕು ಆಡಳಿತದಿಂದ ರೈತರಿಗೆ ಯಾವುದೇ ರೀತಿಯ ಸಹಕಾರ ಸಿಗುತ್ತಿಲ್ಲ. ರೈತರು ಬೆಳೆ ನಷ್ಟದಲ್ಲಿದ್ದಾರೆ. ಈಗಾಗಲೇ ವಿಮಾ ಕಂಪನಿಯವರು ಮಾಡುತ್ತಿರುವ ಸರ್ವೆ ಕಾರ್ಯ ಲೋಪವಾಗಿದೆ. ಈ ಬಗ್ಗೆ ಜಿಲ್ಲಾಡಳಿತ ಅಥವಾ ತಾಲೂಕು ಆಡಳಿತವಾಗಲಿ ಒಮ್ಮೆ ಪರಿಶೀಲನೆ ಮಾಡಿಲ್ಲ. ರೈತರ ಬಗ್ಗೆ ಕಾಳಜಿ ಇಲ್ಲದೆ ಬೇಜವಾಬ್ದಾರಿ ತೋರಿದ್ದಾರೆ ಎಂದು ಆರೋಪಿಸಿದರು.

----

ಸಂಬಂಧಿತ ಸುದ್ದಿ

Kannada News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ