ಪ್ಯಾಕೇಜ್

Contributed byrudreshs2009@gmail.com|Vijaya Karnataka

ಇಟಗಿ ಗ್ರಾಮದ ಅರಿವು ಕೇಂದ್ರದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಜಯಂತಿಯನ್ನು ಆಚರಿಸಲಾಯಿತು. ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಹರಿಕಾರರಾದ ಅಂಬೇಡ್ಕರ್‌ ಅವರ ಆದರ್ಶಗಳನ್ನು ವಿದ್ಯಾರ್ಥಿಗಳು ಪಾಲಿಸಬೇಕು ಎಂದು ಸಂಪನ್ಮೂಲ ವ್ಯಕ್ತಿ ಜಿ.ಕೆ.ಹಚ್ಚಂಬಲಿ ತಿಳಿಸಿದರು. ಬೇಸಿಗೆ ಶಿಬಿರದಲ್ಲಿ ಈ ಕಾರ್ಯಕ್ರಮ ನಡೆಯಿತು. ಹಲವು ಗಣ್ಯರು ಉಪಸ್ಥಿತರಿದ್ದರು.

special program on dr br ambedkar jayanti at summer camp

ಅಂಬೇಡ್ಕರ್ ಸಾಮಾಜಿಕ ನ್ಯಾಯದ ಹರಿಕಾರ

ವಿಕ ಸುದ್ದಿಲೋಕ ಇಟಗಿ

ಸ್ಥಳೀಯ ಅರಿವು ಕೇಂದ್ರ, ಗ್ರಾಪಂ ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿನಡೆಯುತ್ತಿರುವ ಬೇಸಿಗೆ ಶಿಬಿರದಲ್ಲಿಸಂವಿಧಾನ ಶಿಲ್ಪಿ ಡಾ.ಬಿ.ಆರ್ .ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.

ಸಂಪನ್ಮೂಲ ವ್ಯಕ್ತಿ ಹಾಗೂ ಮುಖ್ಯೋಪಾದ್ಯಾಯ ಜಿ.ಕೆ.ಹಚ್ಚಂಬಲಿ ಮಾತನಾಡಿ,‘‘ ಅಂಬೇಡ್ಕರ್ ಅವರು ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಹರಿಕಾರರಾಗಿದ್ದರು. ವಿದ್ಯಾರ್ಥಿಗಳು ಅವರಂತೆ ಕಷ್ಟಪಟ್ಟು ಓದಿ ದೊಡ್ಡ ವ್ಯಕ್ತಿಗಳಾಗಬೇಕು,’’ಎಂದರು.

ಸಹಶಿಕ್ಷಕ ಸಂಗಮೇಶ ಚಿಕ್ಕಮಠ, ದೈಹಿಕ ಶಿಕ್ಷಣ ಶಿಕ್ಷಕ ವಿ.ಎಸ್ .ಚರಂತಿಮಠ, ಎಸ್ ಡಿಎಂಸಿ ಅಧ್ಯಕ್ಷ ಮೋಹನ ಬಡಿಗೇರ, ಅರಿವು ಕೇಂದ್ರದ ಮೇಲ್ವಿಚಾರಕ ರುದ್ರೇಶ ಸಂಪಗಾವಿ ಉಪಸ್ಥಿತರಿದ್ದರು.

ಫೋಟೋ 14ಇಟಗಿ5: ಇಟಗಿ ಗ್ರಾಮದ ಅರಿವು ಕೇಂದ್ರದಲ್ಲಿಅಂಬೇಡ್ಕರ್ ಜಯಂತಿ ಆಚರಿಸಲಾಯಿತು.