ರಾಜ್ಯ ಮಟ್ಟದ ಮಾಧ್ಯಮ ಹಬ್ಬ ‘ಸಂಭ್ರಮ’-2026

Contributed bymadhugirinews@gmail.com|Vijaya Karnataka

ತುಮಕೂರಿನ ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರವು ರಾಜ್ಯಮಟ್ಟದ ಮಾಧ್ಯಮ ಹಬ್ಬ 'ಸಂಭ್ರಮ'-2026 ಅನ್ನು ಏ.23 ಮತ್ತು 24ರಂದು ಆಯೋಜಿಸಿದೆ. ರಾಜ್ಯದ ಪದವಿ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಬಹುದು. ಎಂಟು ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ರೇಡಿಯೋ ಜಾಕಿ, ಫೋಟೋಗ್ರಫಿ, ವರದಿಗಾರಿಕೆ, ಟೆಲಿವಿಷನ್ ಸುದ್ದಿ ವಾಚನ ಸೇರಿದಂತೆ ವಿವಿಧ ಸ್ಪರ್ಧೆಗಳು ನಡೆಯಲಿವೆ. ಆನ್‌ಲೈನ್ ಅಥವಾ ಸ್ಥಳದಲ್ಲಿ ನೋಂದಣಿ ಮಾಡಿಕೊಳ್ಳಬಹುದು.

state level media festival encourages student skills

ತುಮಕೂರು: ನಗರದ ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರ ರಾಜ್ಯಮಟ್ಟದ ಮಾಧ್ಯಮ ಹಬ್ಬ ಸಂಭ್ರಮ-2026 ಕಾರ್ಯಕ್ರಮವನ್ನು ಏ.23 ಮತ್ತು 24ರಂದು ಹಮ್ಮಿಕೊಂಡಿದ್ದು, ಇದಕ್ಕೆ ರಾಜ್ಯದ ಪದವಿ ವಿದ್ಯಾರ್ಥಿಗಳು ನೋಂದಾಯಿಸಿಕೊಳ್ಳಬಹುದು.

ರಾಜ್ಯದ ವಿವಿಧ ಜಿಲ್ಲೆಗಳ ಪದವಿ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದು, ಅವರಲ್ಲಿನ ಕೌಶಲಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಒಂದು ಉತ್ತಮ ಕಾರ್ಯಕ್ರಮವಾಗಿದೆ. ಎರಡು ದಿನದ ಈ ಕಾರ್ಯಕ್ರಮದಲ್ಲಿಒಟ್ಟು ಎಂಟು ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಮಾಧ್ಯಮ ಮತ್ತು ಪ್ರಚಲಿತ ವಿಷಯಗಳ ಕುರಿತು ರೇಡಿಯೋ ಜಾಕಿ, ಪಿಟಿಸಿ, ಫೋಟೋಗ್ರಫಿ, ವೈರಲ್ ಅಡ್ಡ (ರೀಲ್ಸ್ ), ವರದಿಗಾರಿಕೆ, ಟೆಲಿವಿಷನ್ ಸುದ್ದಿ ವಾಚನ (ನ್ಯೂಸ್ ರೀಡಿಂಗ್ ), ಕೊಲೇಜ್ ಮೇಕಿಂಗ್ , ಮ್ಯಾಡ್ ಆಡ್ಸ್ ಸ್ಪರ್ಧೆಗಳು ನಡೆಯಲಿದ್ದು. ಯಾವುದೇ ಪದವಿ ಕಾಲೇಜಿನಲ್ಲಿವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಸ್ಪರ್ಧೆಗಳಲ್ಲಿಭಾಗವಹಿಸಬಹುದು.

ಸ್ಪರ್ಧೆಯಲ್ಲಿಭಾಗವಹಿಸುವ ವಿದ್ಯಾರ್ಥಿಗಳು ಆನ್ ಲೈನ್ ಅಥವಾ ಸ್ಥಳದಲ್ಲಿಯೇ ನೋಂದಣಿ ಮಾಡಿಕೊಳ್ಳುವ ಅವಕಾಶ ಕಲ್ಪಿಸಲಾಗಿದೆ. ನೋಂದಣಿ ಮಾಡಿಕೊಳ್ಳುವವರು ಕಾಲೇಜಿನ ಪ್ರಾಂಶುಪಾಲರ ಬಳಿ ಅನುಮತಿ ಪತ್ರ ಮತ್ತು ವಿದ್ಯಾರ್ಥಿಗಳ ಕಾಲೇಜಿನ ಗುರುತಿನ ಪತ್ರ ತರಬೇಕು. ನೋಂದಣಿಗಾಗಿ ಪ್ರತಿಭಾ - 9110659511, ತೇಜ- 7760019257 ಅವರನ್ನು ಸಂಪರ್ಕಿಸಬಹುದಾಗಿದೆ.