ಇಂದು ಜೆಡಿಎಸ್ ಮಹಿಳಾ ಘಟಕದಿಂದ ಪ್ರತಿಭಟನೆ
ಕೊಪ್ಪಳ:‘‘ ಮಹಿಳಾ ಮೀಸಲು ವಿಧೇಯಕ ಮಸೂದೆಗೆ ಲೋಕಸಭೆಯಲ್ಲಿಸೋಲುಂಟಾದ ಹಿನ್ನೆಲೆಯಲ್ಲಿಜೆಡಿಎಸ್ ನಿಂದ ಮಂಗಳವಾರ ಪ್ರತಿಭಟನಾ ಸಭೆ ಆಯೋಜಿಸಿದೆ,’’ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ. ‘‘ಕಾಂಗ್ರೆಸ್ ನ ಮಹಿಳಾ ವಿರೋಧಿ ನೀತಿ ಖಂಡಿಸಿ ಬಸವೇಶ್ವರ ವೃತ್ತದಲ್ಲಿಪ್ರತಿಭಟನಾ ಸಭೆ ನಡೆಯಲಿದೆ. ಪಕ್ಷದ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ.ಚಂದ್ರಶೇಖರ, ಜಿಲ್ಲಾಧ್ಯಕ್ಷ ಸುರೇಶ್ ಭೂಮರಡ್ಡಿ ಭಾಗವಹಿಸಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿಮಹಿಳೆಯರು ಭಾಗವಹಿಸಬೇಕು,’’ ಎಂದು ಪಕ್ಷದ ಮುಖಂಡರು ಪ್ರಕಟಣೆಯಲ್ಲಿತಿಳಿಸಿದ್ದಾರೆ.

