ಜನಿವಾರಕ್ಕೆ ಕತ್ತರಿ ಖಂಡನೀಯ

Contributed bypurnima.muni@gmail.com|Vijaya Karnataka

ಬೆಂಗಳೂರು ನಗರದ ಖಾಸಗಿ ಶಾಲೆಯಲ್ಲಿ ಪರೀಕ್ಷೆ ವೇಳೆ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ಕತ್ತರಿಸಿದ ಘಟನೆ ಖಂಡನೆಗೆ ಗುರಿಯಾಗಿದೆ. ಇದು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು. ಪುನಃ ಜನಿವಾರ ಧರಿಸುವ ಧಾರ್ಮಿಕ ಕಾರ್ಯಕ್ರಮದ ವೆಚ್ಚವನ್ನು ಅವರೇ ಭರಿಸುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

incident of cutting brahmin students janeu condemned g satish kumar

ಜನಿವಾರಕ್ಕೆ ಕತ್ತರಿ ಖಂಡನೀಯ

ವಿಕ ಸುದ್ದಿಲೋಕ ವಿಜಯಪುರ

ಬೆಂಗಳೂರು ನಗರದ ಖಾಸಗಿ ಶಾಲೆ, ಚಿಕ್ಕಬಳ್ಳಾಪುರದಲ್ಲಿಪರೀಕ್ಷೆಯ ವೇಳೆ ಬ್ರಾಹ್ಮಣ ಸಮುದಾಯ ವಿದ್ಯಾರ್ಥಿಗಳ ಜನಿವಾರ ಕತ್ತರಿಸಿರುವ ಘಟನೆ ಖಂಡನೀಯ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ನಿರ್ದೇಶಕ ಜಿ.ಸತೀಶ್ ಕುಮಾರ್ ಹೇಳಿದರು.

ಪಟ್ಟಣದಲ್ಲಿನಡೆದ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ಸಿಇಟಿ ಪರೀಕ್ಷೆಯ ವೇಳೆ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳ ಜನಿವಾರ ಕತ್ತರಿಸಿರುವುದು ನಮಗೆ ತುಂಬಾ ನೋವು ತಂದಿದೆ. ಪರೀಕ್ಷಾ ಕೇಂದ್ರಗಳಲ್ಲಿಎಲೆಕ್ಟ್ರಾನಿಕ್ ವಸ್ತು ಪತ್ತೆ ಹಚ್ಚಲು ಡಿಟೆಕ್ಟರ್ ಬಳಸುವಾಗ, ಕೇವಲ ನೂಲಿನಿಂದ ತಯಾರಿಸಿದ, ದ್ವಿಜತ್ವದ ಸಂಕೇತವಾದ ಜನಿವಾರವನ್ನು ಕತ್ತರಿಸಿರುವುದು ಅಕ್ಷಮ್ಯ. ತಪ್ಪಿತಸ್ಥರಿಗೆ ಶಿಕ್ಷೆ ನೀಡುವುದರ ಜತೆಗೆ, ಪುನಃ ಜನಿವಾರ ಧರಿಸುವ ಧಾರ್ಮಿಕ ಕಾರ್ಯಕ್ರಮದ ವೆಚ್ಚವನ್ನು ತಪ್ಪಿತಸ್ಥರೇ ಭರಿಸುವಂತೆ ಸರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ, ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

28.ವಿಜಯಪುರ 03: ಜಿ.ಸತೀಶ್ ಕುಮಾರ್ .