ದೇವರ ಮೂರ್ತಿ ಮೇಲಿದ್ದ ಬೆಳ್ಳಿ ಆಭರಣ ಕಳ್ಳತನ
ಧಾರವಾಡ: ತಾಲೂಕಿನ ಲಕಮಾಪುರ ಗ್ರಾಮದಲ್ಲಿದೇವಸ್ಥಾನದ ಕೀಲಿ ಮುರಿದ ಕಳ್ಳರು ದೇವರ ಮೂರ್ತಿ ಮೇಲಿದ್ದ ಬೆಳ್ಳಿ ಆಭರಣಗಳನ್ನು ಕಳ್ಳತನ ಮಾಡಿದ ಘಟನೆ ಸೋಮವಾರ ತಡರಾತ್ರಿ ನಡೆದಿದೆ.
ಗ್ರಾಮದ ಬಸವಣ್ಣ ದೇವರ ಮೂರ್ತಿ ಮೇಲಿದ್ದ 1 ಕೆಜಿಗೂ ಅಧಿಧಿಕ ತೂಕದ ಬೆಳ್ಳಿ ಆಭರಣಗಳು ಕಳ್ಳತನವಾಗಿವೆ. ಮಂಗಳವಾರ ಬೆಳಗ್ಗೆ ಅರ್ಚಕರು ದೇವಸ್ಥಾನಕ್ಕೆ ಹೋಗಿ ನೋಡಿದಾಗ ಕಳ್ಳತನ ಗೊತ್ತಾಗಿದೆ.
ಗ್ರಾಮದ ಹಿರಿಯರು ಗರಗ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಗರಗ ವೃತ್ತ ಸಿಪಿಐ ಶಿವಯೋಗಿ ಲೋಹಾರ್ , ಪಿಎಸ್ ಐ ಸಿದ್ರಾಮಪ್ಪ, ಶ್ವಾನದಳ ಹಾಗೂ ಬೆರಳಚ್ಚು ತಜ್ಞರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

