ಚೂರು ಪಾರು

Contributed bymaruthi.sunagar@timesofindia.com|Vijaya Karnataka

ಬಳ್ಳಾರಿಯಲ್ಲಿ ನಾಳೆ ನೇರ ಸಂದರ್ಶನ ನಡೆಯಲಿದೆ. ಐಟಿಐ ಅಥವಾ ಪದವಿ ಪಡೆದ ಪುರುಷರು ಭಾಗವಹಿಸಬಹುದು. ಏ.13ರಂದು ಪಿಂಚಣಿದಾರರ ಕುಂದುಕೊರತೆ ಆಲಿಸಲು ಅದಾಲತ್‌ ಏರ್ಪಡಿಸಲಾಗಿದೆ. ಬಳ್ಳಾರಿ, ವಿಜಯನಗರ, ಕೊಪ್ಪಳ, ಚಿತ್ರದುರ್ಗ ಜಿಲ್ಲೆಗಳ ಪಿಂಚಣಿದಾರರು ಇದರ ಸದುಪಯೋಗ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ನೀಡಲಾದ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು.

job interview and pension adalat program in ballari district

ನೇರ ಸಂದರ್ಶನ ನಾಳೆ

ಬಳ್ಳಾರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಏ.9 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಗರದ ಹಳೆಯ ತಾಲೂಕು ಕಚೇರಿ ಆವರಣದಲ್ಲಿನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿನೇರ ಸಂದರ್ಶನ ಏರ್ಪಡಿಸಲಾಗಿದೆ. ಐಟಿಐ (ಫಿಟ್ಟರ್ ) ಅಥವಾ ಯಾವುದೇ ಪದವಿ ಹೊಂದಿದ ಪುರುಷ ಅಭ್ಯರ್ಥಿಗಳು ಮಾತ್ರ ಸಂದರ್ಶನದಲ್ಲಿಭಾಗವಹಿಸಬಹುದಾಗಿದೆ. ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮೊ.7619207762, 9663263086, 7676774293, 6360408094 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

13ರಂದು ಪಿಂಚಣಿ ಅದಾಲತ್

ಬಳ್ಳಾರಿ: ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆಯ ಬಳ್ಳಾರಿ ಪ್ರಾದೇಶಿಕ ಕಚೇರಿಯಿಂದ ಪಿಂಚಣಿದಾರರ ಕುಂದು ಕೊರತೆ ಆಲಿಸಿ, ಪರಿಹರಿಸಲು ಏ.13ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಗರದ ಪ್ರಾದೇಶಿಕ ಕಚೇರಿಯಲ್ಲಿಪಿಂಚಣಿ ಅದಾಲತ್ ಕಾರ್ಯಕ್ರಮ ಏರ್ಪಡಿಸಲಾಗಿದೆ. ಬಳ್ಳಾರಿ, ವಿಜಯನಗರ, ಕೊಪ್ಪಳ, ಚಿತ್ರದುರ್ಗ ಜಿಲ್ಲೆಗಳ ಪಿಂಚಣಿದಾರರು ತಮ್ಮ ಕುಂದುಕೊರತೆಗಳಿದ್ದಲ್ಲಿಮಾಹಿತಿಗೆ ದೂ.08392-268943 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಪ್ರಾದೇಶಿಕ ಕಚೇರಿಯ ಸಹಾಯಕ ಭವಿಷ್ಯ ನಿಧಿ ಆಯುಕ್ತರಾದ ಮಾಲತಿ ಅವರು ಪ್ರಕಟಣೆಯಲ್ಲಿತಿಳಿಸಿದ್ದಾರೆ.