ಬೇಸಿಗೆ ಶಿಬಿರ ಉದ್ಘಾಟನೆ ಕುಂದಾಪುರ: ಇಂದಿನ ಮಕ್ಕಳಿಗೆ Ö

Contributed byjohn.dsouza@timesofindia.com|Vijaya Karnataka

ಕುಂದಾಪುರದಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ಬೇಸಿಗೆ ಶಿಬಿರವನ್ನು ಮಹಿಳಾ ಉದ್ಯಮಿ ವಸಂತಿ ಎಂ. ಶೆಟ್ಟಿ ಉದ್ಘಾಟಿಸಿದರು. ಮಕ್ಕಳಿಗೆ ಹಳ್ಳಿ ಜೀವನದ ಪರಿಚಯ ಮಾಡಿಕೊಡುವ ಉದ್ದೇಶದಿಂದ ಈ ಶಿಬಿರವನ್ನು ಆಯೋಜಿಸಲಾಗಿದೆ. ಇದು ಮಕ್ಕಳಿಗೆ ಸಂಪ್ರದಾಯಗಳ ಅರಿವು ಮೂಡಿಸಿ ಉತ್ತಮ ನಾಗರಿಕರನ್ನಾಗಿ ರೂಪಿಸಲು ಸಹಕಾರಿ ಎಂದು ಅವರು ಅಭಿಪ್ರಾಯಪಟ್ಟರು. ಕುಂದಾಪುರ ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ಸೀತಾರಾಮ ನಕ್ಕತ್ತಾಯ ಶುಭ ಹಾರೈಸಿದರು.

summer camp inauguration in kundapura introducing village life to children

ಬೇಸಿಗೆ ಶಿಬಿರ ಉದ್ಘಾಟನೆ

ಕುಂದಾಪುರ : ಇಂದಿನ ಮಕ್ಕಳಿಗೆ ಹಳ್ಳಿ ಜೀವನದ ಪರಿಚಯವಿಲ್ಲ. ಆದರೆ ಈ ರೀತಿಯ ಮಕ್ಕಳ ಶಿಬಿರವನ್ನು ಶಾಲೆಗಳಲ್ಲಿಆಯೋಜಿಸುವುದರಿಂದ ಮಕ್ಕಳಿಗೆ ಹಳ್ಳಿ ಸೊಗಡಿನ ಸಂಪ್ರದಾಯಗಳ ಪರಿಚಯವಾಗಿ ಉತ್ತಮ ನಾಗರಿಕರಾಗುವ ದಾರಿಯಲ್ಲಿಮುನ್ನಡೆಯಲು ಸಹಾಯವಾಗುತ್ತದೆ ಎಂದು ಹುಣ್ಸೆಮಕ್ಕಿಯ ಮಹಿಳಾ ಉದ್ಯಮಿ ವಸಂತಿ ಎಂ. ಶೆಟ್ಟಿ ಹೇಳಿದರು. ಇಲ್ಲಿನ ಎಚ್ ಎಂಎಂ ಮತ್ತು ವಿಕೆಆರ್ ಆಚಾರ್ಯ ಸ್ಮಾರಕ ಆಂಗ್ಲಮಾಧ್ಯಮ ಶಾಲೆಯಲ್ಲಿಆಯೋಜಿಸಲಾಗಿದ್ದ *ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ ಸೀಸನ್ 4-ಮಕ್ಕಳ ಬೇಸಿಗೆ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಕುಂದಾಪುರ ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ಸೀತಾರಾಮ ನಕ್ಕತ್ತಾಯ ಶುಭಹಾರೈಸಿದರು. ಉಪಪ್ರಾಂಶುಪಾಲೆ ಶುಭಾ ಕೆ.ಎನ್ . ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕಿ ರಂಜನಿ ಕಾರ್ಯಕ್ರಮ ನಿರ್ವಹಿಸಿದರು.

ಪೋಟೊ//9ಕೆ-ಎಸ್ ಬಿಆರ್ //. ಮಹಿಳಾ ಉದ್ಯಮಿ ವಸಂತಿ ಎಂ.ಶೆಟ್ಟಿ ಶಿಬಿರ ಉದ್ಘಾಟಿಸಿದರು.

‰‰‰‰‰.