ರಾಣೇಬೆನ್ನೂರ: ತಾಲೂಕಿನ ಹುಲಿಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿಓವರ್ ಟೇಕ್ ಮಾಡಲು ಹೋಗಿ ನಿಯಂತ್ರಣ ತಪ್ಪಿದ ಲಾರಿ ಸೇತುವೆ ಮೇಲಿನಿಂದ ಬಿದ್ದು ಚಾಲಕ ಮೃತಪಟ್ಟಿದ್ದಾನೆ. ಲಾರಿ ಚಾಲಕ ಬೆಳಗಾವಿ ಚಿಕ್ಕೋಡಿ ತಾಲೂಕಿನ ದುಳಗನವಾಡಿ ನಾಗೇಶ ದಡ್ಡೆ (36) ಮೃತರು. ಸಹೋದರ ಕಾಶೀನಾಥ ಪ್ರಕಾಶ ದಡ್ಡೆ ಗಾಯಗೊಂಡಿದ್ದು, ರಾಣೇಬೆನ್ನೂರು ಸರಕಾರಿ ಆಸ್ಪತ್ರೆ ದಾಖಲಿಸಲಾಗಿದೆ. ಕೊಲ್ಲಾಪುರದಿಂದ ಸಕ್ಕರೆ ಲೋಡ್ ಮಾಡಿಕೊಂಡು ಮಂಡ್ಯ ಕಡೆಗೆ ತೆರಳುತ್ತಿದ್ದ ಸಮಯದಲ್ಲಿಈ ಘಟನೆ ನಡೆದಿದೆ. ಈ ಕುರಿತು ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿಪ್ರಕರಣ ದಾಖಲಾಗಿದೆ.