ವಿಕ ಸುದ್ದಿಲೋಕ ಮಂಗಳೂರುಪಟ್ಟಣ ಸಹಕಾರ ಬ್ಯಾಂಕ್ ಗಳ ವಿಭಾಗದಲ್ಲಿಅತ್ಯುತ್ತಮ ಸಾಧನೆಗಾಗಿ ಮಂಗಳೂರಿನ ಎಂಸಿಸಿ ಬ್ಯಾಂಕ್ ಗೆ ದಕ್ಷಿಣ ಕನ್ನಡ ಜಿಲ್ಲಾಕೇಂದ್ರ ಸಹಕಾರಿ (ಎಸ್ ಸಿಡಿಸಿಸಿ) ಬ್ಯಾಂಕ್ ಪ್ರತಿಷ್ಠಿತ ಸರ್ವತೋಮುಖ ಅಭಿವೃದ್ಧಿಗಾಗಿ ಸಾಧನಾ ಪ್ರಶಸ್ತಿ 2025-26 ಲಭಿಸಿದೆ. ಶನಿವಾರ ನಡೆದ ಎಸ್ ಸಿಡಿಸಿಸಿ ಬ್ಯಾಂಕ್ ನ ವಾರ್ಷಿಕ ಮಹಾಸಭೆಯಲ್ಲಿಸಹಕಾರ ಕ್ಷೇತ್ರದ ಗಣ್ಯರ ಸಮ್ಮುಖದಲ್ಲಿಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್ . ರಾಜೇಂದ್ರ ಕುಮಾರ್ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ಎಂಸಿಸಿ ಬ್ಯಾಂಕ್ ಪರವಾಗಿ ಉಪಾಧ್ಯಕ್ಷರು, ಪ್ರಧಾನ ವ್ಯವಸ್ಥಾಪಕರು, ನಿರ್ದೇಶಕರು ಹಾಗೂ ಉಪ ಪ್ರಧಾನ ವ್ಯವಸ್ಥಾಪಕರು ಪ್ರಶಸ್ತಿ ಸ್ವೀಕರಿಸಿದರು. ಈ ಸಾಧನೆಯು ಸಹಕಾರ ರತ್ನ, ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಅವರ ದೂರದೃಷ್ಟಿಯ ನಾಯಕತ್ವ, ಆಡಳಿತ ಮಂಡಳಿ ಹಾಗೂ ಸಿಬ್ಬಂದಿಯ ಬದ್ಧ ಪ್ರಯತ್ನ ಮತ್ತು ಗ್ರಾಹಕರು ಹಾಗೂ ಷೇರುದಾರರು ಬ್ಯಾಂಕ್ ಮೇಲೆ ಇಟ್ಟಿರುವ ವಿಶ್ವಾಸದ ಪ್ರತೀಕವಾಗಿದೆ.
ಫೋಟೊ :
24ಅ- ಎಂಸಿಸಿ
ಎಂಸಿಸಿ ಬ್ಯಾಂಕ್ ಗೆ ಪ್ರತಿಷ್ಠಿತ ಸರ್ವತೋಮುಖ ಅಭಿವೃದ್ಧಿಗಾಗಿ ಸಾಧನಾ ಪ್ರಶಸ್ತಿ ಪ್ರದಾನ ಮಾಡಲಾಯಿತು.