ನಿರಂತರ 25 ಗಂಟೆಗಳ ಕಾಲ ದಾಸ ಸಾಹಿತ್ಯದ ಗೀತೆಗಳನ್ನು ಹಾಡಿ ಇಂಡಿಯಾ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲೆಗೈದ ವಿದುಷಿ ಸಂಗೀತಾ ಬಾಲಚಂದ್ರ ಅವರನ್ನು ಕನ್ನಡ ಸಾಹಿತ್ಯ ಪರಿಷÜತ್ತು ಉಡುಪಿ ತಾಲೂಕು ಘಟಕದಿಂದ ಅದಮಾರು ಮಠದ ಹಿರಿಯ ಯತಿ ಶ್ರೀವಿಶ್ವ ಪ್ರಿಯ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿಸೋಮವಾರ ಸನ್ಮಾನಿಸಲಾಯಿತು. ಈ ಸಂದರ್ಭ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕ ಉಡುಪಿ ವಿಶ್ವನಾಥ್ ಶೆಣೈ, ಪ್ರಭಾವತಿ ಶೆಣೈ, ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಹೆಚ್ .ಪಿ., ಗೌರವ ಕಾರ್ಯ ದರ್ಶಿ ಜನಾರ್ದನ್ ಕೊಡವೂರು, ರಂಜನಿ ವಸಂತ್ , ಕೋಶಾಧಿಕಾರಿ ರಾಜೇಶ್ ಭಟ್ ಪಣಿಯಾಡಿ, ಪದಾಧಿಕಾರಿಗಳಾದ ರಾಘವೇಂದ್ರ ಪ್ರಭು ಕರ್ವಾಲು, ದೀಪಾ ಚಂದ್ರಕಾಂತ್ , ಸುಮಿತ್ರಾ ಭಟ್ ಉಪಸ್ಥಿತರಿದ್ದರು.