ಕುರ್ಚಿ ಕಾದಾಟದಿಂದ ಅಭಿವೃದ್ಧಿ ಕುಂಠಿತ: ಸಂಸದ

Contributed byharisha.lakshmipathy@timesgroup.com|Vijaya Karnataka

ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ರಾಜ್ಯದ ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಜಗಳದಿಂದ ಅಭಿವೃದ್ಧಿ ಕಾರ್ಯಗಳು ಹಿನ್ನಡೆಯಾಗುತ್ತಿವೆ ಎಂದು ತಿಳಿಸಿದರು. ಇದು ಕಾಂಗ್ರೆಸ್ ಪಕ್ಷದ ಆಂತರಿಕ ವಿಷಯವಾಗಿದ್ದರೂ, ಅಭಿವೃದ್ಧಿಗೆ ಅಡ್ಡಿಯಾಗುತ್ತಿದೆ ಎಂದರು. ತಿ.ನರಸೀಪುರದಲ್ಲಿ ಕೆಎಸ್‌ಐಸಿ ಜಾಗವನ್ನು ಕ್ರೀಡಾಂಗಣಕ್ಕೆ ನೀಡುವ ವಿಚಾರದಲ್ಲಿ ರಾಜ್ಯ ಸರ್ಕಾರದ ದ್ವಂದ್ವ ನೀತಿಯನ್ನು ಅವರು ಖಂಡಿಸಿದರು. ಕೆಎಸ್‌ಐಸಿ ಜಾಗವನ್ನು ಅಭಿವೃದ್ಧಿಗೆ ಬಳಸಬೇಕು ಎಂಬುದು ತಮ್ಮ ಒತ್ತಾಯ ಎಂದರು.

development hindered by chair struggle mp yaduveer krishnadatta

ಕುರ್ಚಿ ಕಾದಾಟದಿಂದ ಅಭಿವೃದ್ಧಿ ಕುಂಠಿತ: ಸಂಸದ

ವಿಕ ಸುದ್ದಿಲೋಕ ಮೈಸೂರು

ರಾಜ್ಯದಲ್ಲಿಸಿಎಂ ಕುರ್ಚಿ ಕಾದಾಟದಿಂದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.

ಮೈಸೂರು ನಗರದಲ್ಲಿಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘‘ಕುರ್ಚಿ ಕಾದಾಟ ಕಾಂಗ್ರೆಸ್ ಆಂತರಿಕ ವಿಚಾರ. ಈ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಮಾಧ್ಯಮದವರು ಏನನ್ನು ಹೇಳುತ್ತಾರೆ ಅಷ್ಟೆ ಗೊತ್ತಿರುವುದು. ಆದರೆ, ಕಾದಾಟದಿಂದ ಅಭಿವೃದ್ಧಿಗೆ ಹಿನ್ನಡೆಯಾಗುತ್ತಿದೆ,’’ ಎಂದು ಹೇಳಿದರು.

ತಿ.ನರಸೀಪುರದಲ್ಲಿಕೆಎಸ್ ಐಸಿ ಭೂಮಿಯನ್ನು ಕ್ರೀಡಾಂಗಣಕ್ಕೆ ನೀಡುವ ವಿಚಾರವಾಗಿ ಪ್ರತಿಕ್ರಿಯಿಸಿ, ‘‘ಈ ಬಗ್ಗೆ ರಾಜ್ಯ ಸರಕಾರ ದ್ವಂದ್ವ ನೀತಿಯನ್ನು ಅನುಸರಿಸುತ್ತಿದೆ. ಕೆಎಸ್ ಐಸಿ ಜಾಗವನ್ನು ಕೆಎಸ್ ಐಸಿ ಅಭಿವೃದ್ಧಿಗೆ ಬಳಸಬೇಕು. ಇದು ನಮ್ಮ ಒತ್ತಾಯ, ಈ ಬಗ್ಗೆ ನಾವು ಹೋರಾಟ ಮಾಡುತ್ತೇವೆ,’’ ಎಂದರು.