ವಿಕ ಸುದ್ದಿಲೋಕ ಮೈಸೂರು ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಶಾಲಾ ಶಿಕ್ಷಕನೊಬ್ಬ ತಂದೆ-ಮಗನಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದು, ಶಿಕ್ಷಕನನ್ನು ಬಂಧಿಸಲಾಗಿದೆ. ಸಾಲಿಗ್ರಾಮ ತಾಲೂಕಿನ ಚಿಕ್ಕನಾಯಕನಹಳ್ಳಿ ಗ್ರಾಮದಲ್ಲಿಕಳೆದ ಗುರುವಾರ ಈ ಘಟನೆ ನಡೆದಿದೆ. ಗ್ರಾಮದ ನಿವಾಸಿ, ಕೆ.ಆರ್ .ನಗರ ಪಟ್ಟಣದ ಆಂಜನೇಯ ಬಡಾವಣೆಲ್ಲಿರುವ ಸರಕಾರಿ ಪ್ರೌಢಶಾಲೆಯ ಶಿಕ್ಷಕ ಸಿ.ಎನ್ .ಮಂಜುನಾಥ್ ಚಾಕುವಿ ನಿಂದ ಇರಿದು ಹಲ್ಲೆನಡೆಸಿದ್ದು, ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಗ್ರಾಮದ ನಿವಾಸಿ ಸಿ.ಎಂ.ಗೋಪಾಲ್ , ಅವರ ಪುತ್ರ ಅಭಿಷೇಕ್ ಗಾಯಗೊಂಡಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗೋಪಾಲ್ ಗಂಭೀರ ಸ್ಥಿತಿಯಲ್ಲಿದ್ದಾರೆ. ಐದಾರು ಮಹಿಳೆಯರು ಮನೆ ಮುಂದೆ ಮಾತನಾ ಡುತ್ತಿರುವ ವೇಳೆ ಶಿಕ್ಷಕ ಸಿ.ಎನ್ .ಮಂಜುನಾಥ್ ಮೂತ್ರ ವಿಸರ್ಜನೆ ಮಾಡುತ್ತಿದ್ದರು. ಇದನ್ನು ಕಂಡ ಸಿ.ಎಂ.ಗೋಪಾಲ್ ಮಹಿಳೆ ಯರ ಮುಂದೆ ಈ ರೀತಿ ಮೂತ್ರ ವಿಸರ್ಜನೆ ಮಾಡುವುದು ಸರಿಯಲ್ಲಎಂದು ಬುದ್ದಿವಾದ ಹೇಳಿದ್ದಾರೆ. ಇದರಿಂದ ಕೆರಳಿದ ಶಿಕ್ಷಕ ಮಂಜು ನಾಥ್ , ಗೋಪಾಲ್ ಅವರನ್ನು ನಿಂದಿಸಿದ್ದಾರೆ. ಇದನ್ನು ಗೋಪಾಲ್ ಪುತ್ರ ಅಭಿಷೇಕ್ ಪ್ರಶ್ನಿಸಿದ್ದಾರೆ. ತಕ್ಷಣವೇ ಮನೆಯಿಂದ ಚಾಕು ತಂದ ಶಿಕ್ಷಕ ಮಂಜುನಾಥ್ , ಗೋಪಾಲ್ ಅವರನ್ನು ಚಾಕುವಿ ನಿಂದ ಇರಿದಿದ್ದಾರೆ. ಬಿಡಿಸಲು ಬಂದ ಅಭಿಷೇಕ್ ಮೇಲೆಯೂ ದಾಳಿ ನಡೆಸಿದ್ದಾರೆ. ಸಾಲಿಗ್ರಾಮ ಠಾಣೆ ಪೊಲೀಸರು, ಶಿಕ್ಷಕ ಮಂಜುನಾಥ್ ನನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಶಿಕ್ಷಕ ಅಮಾನತು: ಆರೋಪಿ ಶಿಕ್ಷಕ ಮಂಜುನಾಥ್ ವಿರುದ್ಧ ದೂರು ದಾಖಲಾಗಿ ನ್ಯಾಯಾಂಗ ಬಂಧನಕ್ಕೆ ನೀಡಿರುವ ಬಗ್ಗೆ ಪೊಲೀಸ್ ಇಲಾಖೆಯ ವರದಿ ಆಧರಿಸಿ ಡಿಡಿಪಿಐ ಡಿ.ಉದಯ್ ಕುಮಾರ್ , ಶಿಕ್ಷಕ ಮಂಜುನಾಥ್ ನನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

