ನಾಳೆ ವಿಚಾರ ಸಂಕೀರಣ
ಬೆಂಗಳೂರು ಗ್ರಾಮಾಂತರ: ತೋಟಗಾರಿಕೆ ಇಲಾಖೆ ವತಿಯಿಂದ ದೇವನಹಳ್ಳಿ ತಾಲೂಕು ಕಸಬಾ ಹೋಬಳಿಯ ಅಣ್ಣೇಶ್ವರ ಗ್ರಾಮ ಪಂಚಾಯಿತಿ ಕಾರ್ಯಾಲಯ ಆವರಣದಲ್ಲಿಫೆ.11ರಂದು ಬೆಳಗ್ಗೆ11ಕ್ಕೆ ಬೆಣ್ಣೆಹಣ್ಣು ಮತ್ತು ಮೆಕಡೇಮಿಯ ಹಣ್ಣಿನ ವೈಜ್ಞಾನಿಕ ಬೇಸಾಯ ಪದ್ದತಿಯ ಕುರಿತು ವಿಚಾರ ಸಂಕೀರಣ ಹಮ್ಮಿಕೊಳ್ಳಲಾಗಿದೆ.
ವಿಷಯ ತಜ್ಞರಾಗಿ ತೋಟಗಾರಿಕೆ ಇಲಾಖೆ ನಿವೃತ್ತ ಅಪರ ನಿರ್ದೇಶಕ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ. ಹಿತ್ತಲಮನಿ ಎಸ್ .ವಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯಕ್ರಮದಲ್ಲಿಭಾಗವಹಿಸುವರು. ಜಿಲ್ಲೆಯ ಎಲ್ಲಾರೈತರು ಭಾಗವಹಿಸಬೇಕೆಂದು ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿತಿಳಿಸಿದ್ದಾರೆ.

