ಉಧಿದ್ಯೋಗ ಮೇಳ ಆಧಿಯೋಧಿಜನೆ
ವಿಕ ಸುದ್ದಿಲೋಕ ವಿಜಯನಗರ(ಹೊಸಪೇಟೆ)
‘ಧಿ‘ನಗರದ ವಿಜಯನಗರ ಕಾಲೇಜ್ ನಲ್ಲಿಬೃಹತ್ ಉದ್ಯೋಗ ಮೇಳ ಆಯೋಜಿಸಿದ್ದು, 50ಕ್ಕೂ ಅಧಿಕ ಕಂಪನಿಗಳು ಭಾಗವಹಿಸಲಿವೆ,’’ ಎಂದು ಜಿಲ್ಲಾಧಿಕಾರಿ ಕವಿತಾ ಎಸ್ .ಮನ್ನಿಕೇರಿ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಸೋಧಿಮಧಿವಾರ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಉದ್ಯೋಗ ಮೇಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
‘ಧಿ‘ಉದ್ಯೋಗ ಮೇಳದಲ್ಲಿರಾಜ್ಯದ ನಾನಾ ಪ್ರತಿಷ್ಠಿತ 50ಕ್ಕೂ ಹೆಚ್ಚು ಎಂಎನ್ ಸಿ ಕಂಪನಿಗಳು ಭಾಗವಹಿಸಲಿವೆ. ಜಿಲ್ಲೆಯ ನಿರುದ್ಯೋಗ ಯುವಕ, ಯುವತಿಯರಿಗೆ ಸಾಕಷ್ಟು ಉದ್ಯೋಗ ಸಿಗಲಿದೆ. ವಿಶೇಷವಾಗಿ ಗ್ರಾಮೀಣ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಥಮಾದ್ಯತೆ ನೀಡಲಾಗುವುದು. ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಮೇಳದಲ್ಲಿಭಾಗವಹಿಸಲು ಇಚ್ಛಿಸುವ ಅರ್ಹ ಆಸಕ್ತರು 18 ರಿಂದ 35 ವರ್ಷಧಿದೊಧಿಳಧಿಗಿನ ಎಧಿಸ್ಸೆಧಿಸ್ಸೆಧಿಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ನರ್ಸಿಂಗ್ , ಎಂಜಿನಿಯರಿಂಗ್ , ಬಿಕಾಂ, ಬಿಎಸ್ಸಿ, ಬಿಎ, ಬಿಬಿಎ, ಬಿಎಚ್ ಎಂ, ಎಂಕಾಂ, ಎಂಬಿಎ, ಎಂಎಸ್ಸಿ, ಎಂಎ ಪದವಿ ವಿದ್ಯಾರ್ಹತೆ ಹೊಂದಿದವರು ಮೇಳದಲ್ಲಿಭಾಗವಹಿಸಬಹುದು ಮತ್ತು ನೋಂದಣಿ ಮತ್ತು ಹೆಚ್ಚಿನ ಮಾಹಿತಿಗೆ ವಿಜಯನಗರ ಕಾಲೇಜು ಅಥವಾ ದೂ.ಸಂ: 7975278783, 9986779624 ಗೆ ಸಂಪರ್ಕಿಸಬಹುದು,’ಧಿ’ ಎಂದರು.
ಜಿಲ್ಲಾಪಂಚಾಯತ್ ಸಿಇಒ ಮಹ್ಮದ್ ಅಲಿ ಅಕ್ರಂ ಷಾ, ವಿಜಯನಗರ ಕಾಲೇಜು ಅಧ್ಯಕ್ಷ ಮೆಟ್ರಿ ಮಲ್ಲಿಕಾರ್ಜುನ, ಪ್ರಾಂಶುಪಾಲ ಎ.ಮಹಾಂತೇಶ್ ಸೇರಿದಂತೆ ನಾನಾ ಕಂಪನಿಗಳ ಮುಖ್ಯಸ್ಥರು ಇದ್ದರು.
ಪೋಟೊ:ಎಚ್ ಪಿಟಿ05: ಹೊಧಿಸಧಿಪೇಧಿಟೆಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಜಿಲ್ಲಾಧಿಕಾರಿ ಕವಿತಾ ಎಸ್ .ಮನ್ನಿಕೇರಿ ಉದ್ಯೋಗ ಮೇಳದ ಕರಪತ್ರ ಬಿಡುಗಡೆಗೊಳಿಸಿದರು

