ಬೆಳ್ತಂಗಡಿ : ಪಟ್ಟಣ ಪಂಚಾಯಿತಿ ನೀರಿನ ಟ್ಯಾಂಕ್ ಮೀಟರ್ ಸರಿಪಡಿಸುವ ಸಂದರ್ಭದಲ್ಲಿ ನೌಕರ ರೋನಾಲ್ಡ್ ಸಂಜಯನಗರ ಎಂಬವರ ಮೇಲೆ ಹೆಜ್ಜೇನು ದಾಳಿ ನಡೆಸಿದ ಘಟನೆ ಶನಿವಾರ ನಡೆದಿದೆ.
ತಕ್ಷಣ ಕಾರ್ಯಪ್ರವೃತರಾದ ಮುಳುಗು ತಜ್ಞ ಇಸ್ಮಾಯಿಲ್ ಸಂಜಯನಗರ ರಕ್ಷಣಾ ಕಾರ್ಯಕ್ಕೆ ಧಾವಿಸಿ ಹೆಜ್ಜೇನು ಓಡಿಸಿ ನೌಕರನನ್ನು ನೀರಿನ ಟ್ಯಾಂಕಿನಿಂದ ಕೆಳಗಿಳಿಸಿ ರಕ್ಷಿಸಿದರು.
ಗಂಭೀರ ಗಾಯಗೊಂಡಿರುವ ರೋನಾಲ್ಡ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಕ್ಷಣಾ ಕಾರ್ಯದಲ್ಲಿಬೆಳ್ತಂಗಡಿ ಸಂಜಯನಗರ ನಿವಾಸಿಗಳಾದ ಅಕ್ಬರ್ ಬೆಳ್ತಂಗಡಿ, ರಶೀದ್ ಬೆಳ್ತಂಗಡಿ, ಬದ್ರು ಮಟ್ಲ, ಶಫೀರ್ ಸಂಜಯನಗರ, ಇರ್ಫಾನ್ ಬೆಳ್ತಂಗಡಿ, ಶರೀಫ್ ಸಂಜಯನಗರ ಹಾಗೂ ಪಟ್ಟಣ ಪಂಚಾಯಿತಿ ನೌಕರ ಫ್ರಾನ್ಸಿಸ್ ಬೆಳ್ತಂಗಡಿ ಪಾಲ್ಗೊಂಡಿದ್ದರು.

