ಕನ್ನಡ ಶಾಲೆ ಉಳಿಸಿ ಬೆಳೆಸಿ ಸಮಿತಿ ಕಾರ್ಕಳ ಘಟಕದ ಅಧ್ಯಕ್ಷರಾಗಿ ಸುಶಾಂತ್ ಬಜಗೋಳಿ

Contributed byvkkarkala@gmail.com|Vijaya Karnataka

ಕನ್ನಡ ಶಾಲೆ ಉಳಿಸಿ ಬೆಳೆಸಿ ಸಮಿತಿ ಕಾರ್ಕಳ ಘಟಕದ ನೂತನ ಅಧ್ಯಕ್ಷರಾಗಿ ಉದ್ಯಮಿ ಸುಶಾಂತ್‌ ಬಜಗೋಳಿ ಆಯ್ಕೆಯಾಗಿದ್ದಾರೆ. ಈ ಸಮಿತಿಯು ರಾಜ್ಯಮಟ್ಟದಲ್ಲಿ ಕನ್ನಡ ಶಾಲೆಗಳ ಅಭಿವೃದ್ಧಿಗಾಗಿ ಅಭಿಯಾನ ಹಮ್ಮಿಕೊಳ್ಳಲಿದೆ. ಫೆಬ್ರವರಿ 11ರಂದು ಮಂಗಳೂರಿನಲ್ಲಿ ಬೃಹತ್‌ ಸಮಾವೇಶ ನಡೆಯಲಿದೆ. ಇದು ಕನ್ನಡ ಶಾಲೆಗಳ ಭವಿಷ್ಯಕ್ಕೆ ಮಹತ್ವದ ಹೆಜ್ಜೆಯಾಗಿದೆ.

sushant bajagoli elected as new president for kannada school committee

ವಿಕ ಸುದ್ದಿಲೋಕ ಕಾರ್ಕಳ

ಕನ್ನಡ ಶಾಲೆ ಉಳಿಸಿ ಬೆಳೆಸಿ ಸಮಿತಿ ಕಾರ್ಕಳ ಘಟಕದ ಅಧ್ಯಕ್ಷರಾಗಿ ಉದ್ಯಮಿ ಸುಶಾಂತ್ ಬಜಗೋಳಿ ಆಯ್ಕೆಯಾಗಿದ್ದಾರೆ.

ಬಜಗೋಳಿ ಸ.ಪ.ಪೂ. ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾಗಿರುವ ಸುಶಾಂತ್ , ಈ ಹಿಂದೆ ಅಬ್ಬೆಂಜಾಲು ಫ್ರೆಂಡ್ಸ್ ಕ್ಲಬ್ ಅಧ್ಯಕ್ಷರಾಗಿ, ಬಜಗೋಳಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿಯಾಗಿ, ಎಸ್ ಕೆಪಿಎ ಕಾರ್ಕಳ ವಲಯದ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು.

ಸರಕಾರಿ ಶಾಲಾ ಅಭಿವೃದ್ಧಿ ನಿಟ್ಟಿನಲ್ಲಿರಾಜ್ಯಮಟ್ಟದಲ್ಲಿಕನ್ನಡ ಶಾಲೆ ಉಳಿಸಿ ಬೆಳೆಸಿ ಸಮಿತಿ ರಚನೆಯಾಗಿದ್ದು ಅಭಿಯಾನ ಕೈಗೊಳ್ಳಲಿದೆ. ಫೆ.11ರಂದು ಮಂಗಳೂರು ಪುರಭವನದಲ್ಲಿಬೃಹತ್ ಸಮಾವೇಶ ನಡೆಯಲಿದೆ ಎಂದು ಸಮಿತಿಯ ಜಿಲ್ಲಾಧ್ಯಕ್ಷ ವಾಸುದೇವ ರಾವ್ ತಿಳಿಸಿದ್ದಾರೆ.

ಫೊಟೋ: 4ಕೆವಿ-ಸುಶಾಂತ್ ಬಜಗೋಳಿ