ಸಿದ್ಧರಾಮೇಶ್ವರ ಜಯಂತಿ ಆಚರಣೆ
ವಿಕ ಸುದ್ದಿಲೋಕ ವಿಜಯನಗರ(ಹೊಸಪೇಟೆ)
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿಬುಧವಾರ ಆಯೋಜಿಸಿದ್ದ
ಶ್ರೀ ಸಿದ್ಧರಾಮೇಶ್ವರ ಜಯಂತಿಯಲ್ಲಿಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ಅವರು ಸಿದ್ಧರಾಮೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ಶರಣರ ಆದರ್ಶಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿಅಳವಡಿಸಿಕೊಳ್ಳಬೇಕು ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ್ , ಭೋವಿ ಸಮಾಜದ ಜಿಲ್ಲಾಧ್ಯಕ್ಷ ದೊಡ್ಡರಂಗಣ್ಣ, ತಾಲೂಕು ಅಧ್ಯಕ್ಷ ವಿ.ತಿಪ್ಪೇಸ್ವಾಮಿ, ಸಮಾಜದ ಮುಖಂಡರಾದ ಹುಲುಗಪ್ಪ, ರಾಮಾಂಜಿನಿ, ಗಾಳೆಪ್ಪ, ದೆವೇಂದ್ರಪ್ಪ, ಶಂಕರಪ್ಪ, ಮಲ್ಲಿಕಾರ್ಜುನ್ ಇದ್ದರು.
ಪೋಟೊ:ಎಚ್ ಪಿಟಿ14ದೇವರಾಜ03: ಹೊಸಪೇಟೆಯ ಜಿಲ್ಲಾಧಿಕಾರಿ ಕಚೇರಿಯಲ್ಲಿ. ಸಿದ್ಧರಾಮೇಶ್ವರ ಜಯಂತಿ ಆಚರಿಸಲಾಯಿತು.

