ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹ

Contributed bymandalamari84@gmail.com|Vijaya Karnataka

ಗೋತಗಿ ಗ್ರಾಮದ ರೈತರು ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್‌ ಪೂರೈಕೆಗಾಗಿ ಜೆಸ್ಕಾಂ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ವಿದ್ಯುತ್‌ ಕೊರತೆಯಿಂದ ರೈತರು ತೊಂದರೆ ಅನುಭವಿಸುತ್ತಿದ್ದಾರೆ. ಜೆಸ್ಕಾಂ ಅಧಿಕಾರಿಗಳು ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ರೈತ ಸಂಘದ ಮುಖಂಡರು ಆಗ್ರಹಿಸಿದರು. ಈ ಪ್ರತಿಭಟನೆಯಲ್ಲಿ ಗ್ರಾಮದ ಮುಖಂಡರು ಹಾಗೂ ರೈತರು ಪಾಲ್ಗೊಂಡಿದ್ದರು.

villagers protest for adequate electricity supply for farmers

ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹ

ಕುಷ್ಟಗಿ: ರೈತರ ಜಮೀನುಗಳಲ್ಲಿರುವ ಪಂಪ್ ಸೆಟ್ ಗಳಿಗೆ ಸಮರ್ಪಕ ವಿದ್ಯುತ್ ಸರಬರಾಜು ಮಾಡಲು ಆಗ್ರಹಿಸಿ ಪಟ್ಟಣದ ಜೆಸ್ಕಾಂ ಕಚೇರಿ ಆವರಣದಲ್ಲಿಗೋತಗಿ ಗ್ರಾಮಸ್ಥರು ಪ್ರತಿಭಟಿಸಿದರು. ರೈತ ಸಂಘದ ಮುಖಂಡ ನಜೀಸಾಬ್ ಮೂಲಿಮನಿ ಮಾತನಾಡಿ, ‘‘ಸಮರ್ಪಕ ವಿದ್ಯುತ್ ಪೂರೈಕೆಯಾಗದ ಕಾರಣ ರೈತರು ನಿತ್ಯ ಪರದಾಡುತ್ತಿದ್ದಾರೆ. ಹೀಗಾಗಿ, ಜೆಸ್ಕಾಂ ಅಧಿಕಾರಿಗಳು ಸೂಕ್ತ ಕ್ರಮಕ್ಕೆ ಮುಂದಾಗಬೇಕು,’’ ಎಂದು ಆಗ್ರಹಿಸಿದರು. ರೈತ ಮುಖಂಡ ಆರ್ .ಕೆ.ದೇಸಾಯಿ ಮಾತನಾಡಿದರು. ಗೋತಗಿ ಗ್ರಾಮದ ಮುಖಂಡರು ಹಾಗೂ ರೈತರು ಇದ್ದರು.