‘ಸ್ವಚ್ಛ ಪರಿಸರದಿಂದ ರೋಗಮುಕ್ತಿ’

Contributed byyallappatalawar728@gmail.com|Vijaya Karnataka

ರಾಯಬಾಗದಲ್ಲಿ ರಾಷ್ಟ್ರೀಯ ಸ್ವಚ್ಛತಾ ದಿನ ಆಚರಿಸಲಾಯಿತು. ಸ್ವಚ್ಛ ಪರಿಸರದಿಂದ ರೋಗಮುಕ್ತಿ ಸಾಧ್ಯ ಎಂದು ಹಿರಿಯ ದಿವಾಣಿ ನ್ಯಾಯಾಧೀಶ ಜಗದೀಶ ಬಿಸಿರೊಟ್ಟಿ ತಿಳಿಸಿದರು. ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನ್ಯಾಯಾಧೀಶರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಹಲವು ಗಣ್ಯರು ಉಪಸ್ಥಿತರಿದ್ದರು.

practice of clean environment for disease free living

ವಿಕ ಸುದ್ದಿಲೋಕ ರಾಯಬಾಗ

ಪ್ರತಿಯೊಬ್ಬರೂ ತಮ್ಮ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವುದರಿಂದ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಬಹುದು ಎಂದು ಹಿರಿಯ ದಿವಾಣಿ ನ್ಯಾಯಾಧೀಶ ಜಗದೀಶ ಬಿಸಿರೊಟ್ಟಿ ಹೇಳಿದರು.

ಪಟ್ಟಣದ ನ್ಯಾಯಾಲಯದ ಆವರಣದಲ್ಲಿತಾಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘದಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸ್ವಚ್ಛತಾ ದಿನ ಕಾಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಹೆಚ್ಚುವರಿ ದಿವಾಣಿ ನ್ಯಾಯಾಧೀಶ ದಾನಪ್ಪ, ವಕೀಲರ ಸಂಘದ ಅಧ್ಯಕ್ಷ ಕೆ.ಆರ್ .ಕೋಟಿವಾಲೆ, ಎಸ್ .ಎಂ. ಸಲಗರೆ, ಎಂ.ಎಂ. ಪಾಟೀಲ ಹಾಗೂ ನ್ಯಾಯಾಲಯದ ಸಿಬ್ಬಂದಿ ಉಪಸ್ಥಿತರಿದ್ದರು.

-31ರಾಯಬಾಗ2

ರಾಯಬಾಗ ನ್ಯಾಯಾಲಯದ ಆವರಣದಲ್ಲಿರಾಷ್ಟ್ರೀಯ ಸ್ವಚ್ಛತಾ ದಿನ ಕಾರ್ಯಕ್ರಮಕ್ಕೆ ಹಿರಿಯ ದಿವಾಣಿ ನ್ಯಾಯಾಧೀಶ ಜಗದೀಶ ಬಿಸಿರೊಟ್ಟಿ ಚಾಲನೆ ನೀಡಿದರು.