ಕೀರ್ತಿಶೇಷ ಬಲಿಪ ಭಾಗವತದ್ವಯರ ಪ್ರಶಸ್ತಿ 2026 ಪ್ರದಾನ ಸಮಾರಂಭ ಹಾಗೂ 22ನೇ ವರ್ಷದ ತಾಳಮದ್ದಲೆ ಕಾರ್ಯಕ್ರಮ ಜು.19ರಂದು ಮಧ್ಯಾಹ್ನ 2 ರಿಂದ ಮಲ್ಲಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿನಡೆಯಲಿದೆ.ಮಲ್ಲಕ್ಷೇತ್ರದ ಆಡಳಿತ ಮೊಕ್ತೇಸರ ಸತ್ಯನಾರಾಯಣ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ಅರ್ಥಧಾರಿ ಹಾಗೂ ವಿಮರ್ಶಕ ರಾಧಾಕೃಷ್ಣ ಕಲ್ಚಾರ್ ಭಾಗವಹಿಸಲಿದ್ದಾರೆ. ಹಿರಿಯ ಯಕ್ಷಗಾನ ಕಲಾವಿದ ವಾಟೆಪಡ್ಪು ವಿಷ್ಣುಶರ್ಮ ಅಭಿನಂದನಾ ಭಾಷಣ ಮಾಡಲಿದ್ದಾರೆ. ಹಿರಿಯ ಯಕ್ಷಗಾನ ಕಲಾವಿದ ಬಾಲಕೃಷ್ಣ ಭಟ್ ಕೂಟೇಲು ಅವರಿಗೆ ಬಲಿಪ ಭಾಗವತ ಪ್ರಶಸ್ತಿ ಪ್ರದಾನ ನಡೆಯಲಿದೆ.