26ರಂದು ಗುರುವಂದನೆ, ಸ್ನೇಹಮಿಲನ ಕಾರ್ಯಕ್ರಮ

Contributed bygururaja.jd@gmail.com|Vijaya Karnataka
guru vandane sneh milana program on 26th
26ರಂದು ಗುರುವಂದನೆ , ಸ್ನೇಹಮಿಲನ ಕಾರ್ಯಕ್ರಮ

ವಿಕ ಸುದ್ದಿಲೋಕ ಶಿವಮೊಗ್ಗ
ಭದ್ರಾವತಿ ತಾಲೂಕಿನ ಸನ್ಯಾಸಿ ಕೋಡಮಗ್ಗಿ ಸರಕಾರಿ ಪ್ರೌಢಶಾಲೆಯ ಹಳೆ ವಿದ್ಯಾರ್ಥಿಗಳ ಸಂಘದ ಉದ್ಘಾಟನೆ, ಗುರುವಂದನೆ ಮತ್ತು ಸ್ನೇಹÜಮಿಲನ ಕಾರ್ಯಕ್ರಮವನ್ನು ಜು.26ರ ಬೆಳಗ್ಗೆ 9 ಗಂಟೆಗೆ ಶಾಲೆಯ ಆವರಣದಲ್ಲಿಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಕೆ.ಈ.ಪ್ರಶಾಂತ್ ತಿಳಿಸಿದರು.

ಪತ್ರಿಕಾಭವನದಲ್ಲಿಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ನಮ್ಮ ಶಾಲೆಯಲ್ಲಿಶಿಕ್ಷಣ ಪಡೆದ ಹಲವು ವಿದ್ಯಾರ್ಥಿಗಳು ಶಿಕ್ಷಕರು, ವೈದ್ಯರು, ಎಂಜಿನಿಯರ್ , ಉದ್ಯಮಿ ಹಾಗೂ ಸಮಾಜದ ವಿವಿಧ ಕ್ಷೇತ್ರಗಳಲ್ಲಿತಮ್ಮ ಜೀವನ ರೂಪಿಸಿಕೊಂಡಿದ್ದಾರೆ. ಶಿಕ್ಷಕರು ನಮಗೆ ಜ್ಞಾನ ಹಾಗೂ ಮಾರ್ಗದರ್ಶನ ನೀಡುವ ಮೂಲಕ ನಮ್ಮ ಭವಿಷ್ಯ ರೂಪಿಸಿದ್ದಾರೆ. ಅವರನ್ನು ಗೌರವಿಸುವ ಉದ್ದೇಶದಿಂದ ಗುರುವಂದನೆ ಹಮ್ಮಿಕೊಳ್ಳಲಾಗಿದೆ. ಶಾಲೆಯ ಹಳೆ ವಿದ್ಯಾರ್ಥಿಗಳು ಕಾರ್ಯಕ್ರಮಕ್ಕೆ ಆಗಮಿಸಬೇಕು ಎಂದು ಮನವಿ ಮಾಡಿದರು.

ಹನುಮಂತಪ್ಪ, ಟಿ.ನಾಗೇಶ್ , ಶ್ಯಾಮಸುಂದರ್ , ಗೀತಾ ಮತ್ತಿತರರಿದ್ದರು.