ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಇಂಡಿಯಾ ಮೈತ್ರಿಕೂಟದ ನಾಯಕರೊಂದಿಗೆ ಬೀದರ್ ಸಂಸದ ಸಾಗರ ಖಂಡ್ರೆ ಬುಧವಾರ ಹೊಸದೆಹಲಿ ಸಂಸತ್ ಆವರಣದಲ್ಲಿಪ್ರತಿಭಟನೆ ನಡೆಸಿದರು.
* ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಪ್ರತಿಭಟನೆ
ಪ್ರಧಾನ್ ರಾಜೀನಾಮೆಗೆ ಆಗ್ರಹ
ವಿಕ ಸುದ್ದಿಲೋಕ ಬೀದರ್
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಹಾಗೂ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಲಾಠಿ ಪ್ರಹಾರ ಖಂಡಿಸಿ ಹೊಸದಿಲ್ಲಿಯ ಸಂಸತ್ ಭವನದ ಆವರಣದಲ್ಲಿಕಪ್ಪು ಬಟ್ಟೆ ಧರಿಸಿ ಇಂಡಿಯಾ ಮೈತ್ರಿಕೂಟದ ನಾಯಕರೊಂದಿಗೆ ಬೀದರ್ ಸಂಸದ ಸಾಗರ ಖಂಡ್ರೆ ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಸಾಗರ ಖಂಡ್ರೆ, ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡಿರುವ ಈ ಗಂಭೀರ ಪ್ರಕರಣಕ್ಕೆ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧಮೇಂರ್ ದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು. ಇತರೆ ಸಂಸದರು ಜತೆಗಿದ್ದರು.