ರೈತರ ಸಂಘದಿಂದ ಜಿಲ್ಲಾಧಿಕಾರಿಗೆ ಮನವಿ |ವಿಕ ಸುದ್ದಿಲೋಕ ವಿಜಯನಗರ (ಹೊಸಪೇಟೆ)
ಇಲ್ಲಿನ ರಾಯ ಬಸವಣ್ಣ ಮತ್ತು ತುರ್ತಾ ಕಾಲುವೆಗಳಿಗೆ ಕೃಷಿ ಚಟುವಟಿಕೆ ನಡೆಸಲು ನೀರು ಹರಿಸುವುದನ್ನು ನಿಲ್ಲಿಸಿರುವ ಆದೇಶ ಹಿಂಪಡೆಯಬೇಕು ಎಂದು ಆಗ್ರಹಿಸಿ ಹೊಸಪೇಟೆ ರೈತರ ಸಂಘದಿಂದ ಜಿಲ್ಲಾಧಿಕಾರಿ ಕವಿತಾ ಎಸ್ .ಮನ್ನಿಕೇರಿ ಅವರಿಗೆ ಬುಧವಾರ ಮನವಿ ಸಲ್ಲಿಸಲಾಯಿತು.
ಮುನಿರಾಬಾದ್ ಅಧೀಕ್ಷಕ ಅಭಿಯಂತರರ ವರದಿಯ ಮೇರೆಗೆ ಕಲಬುರಗಿ ಪ್ರಾದೇಶಿಕ ಆಯುಕ್ತರು ಈ ಕಾಲುವೆಗಳಿಗೆ ನೀರು ಹರಿಸುವುದನ್ನು ನಿಲ್ಲಿಸಲು ಆದೇಶಿಸಿರುವುದು ಅವೈಜ್ಞಾನಿಕವಾಗಿದೆ. ಈ ಕಾಲುವೆಗಳಿಗೆ ವರ್ಷಗಳ ಇತಿಹಾಸವಿದ್ದು, ನೀರಿಲ್ಲದ ಕಾರಣ ಪ್ರಸ್ತುತ ಬಾಳೆ, ಕಬ್ಬು ಮತ್ತು ತೋಟಗಾರಿಕೆ ಬೆಳೆಗಳು ಹಾಳಾಗುತ್ತಿವೆ. ಹೀಗಾಗಿ, ಶೀಘ್ರ ನೀರು ಹರಿಸಬೇಕು,’’ ಎಂದು ಸಂಘಟನೆ ಪದಾಧಿಕಾರಿಗಳು ಆಗ್ರಹಿಸಿದರು.