ಗೃಹ ಜ್ಯೋತಿಗೆ ಮರು ಅರ್ಜಿ ಸ್ವೀಕಾರ: ನೆಲ್ಯಾಡಿ ಮೆಸ್ಕಾಂ ಕಚೇರಿಯಲ್ಲಿವಿಶೇಷ ಸೌಲಭ್ಯ

Contributed byprashantha.n17@gmail.com|Vijaya Karnataka
grha jyoti scheme special operations for reapplication in nelyadi
ವಿಕ ಸುದ್ದಿಲೋಕ ನೆಲ್ಯಾಡಿ

ಗೃಹಜ್ಯೋತಿ ಯೋಜನೆಗೆ ಮರು ಅರ್ಜಿ ಸಲ್ಲಿಸಲು ಬಯಸುವ ಸಾರ್ವಜನಿಕರ ಅನುಕೂಲಕ್ಕಾಗಿ ನೆಲ್ಯಾಡಿ ಮೆಸ್ಕಾಂ ಕಚೇರಿಯಲ್ಲಿವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ.
ಕೆಲವು ಗ್ರಾಮೀಣ ಪ್ರದೇಶಗಳಲ್ಲಿನೆಟ್ವರ್ಕ್ ಸಮಸ್ಯೆಯಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ, ಮೆಸ್ಕಾಂ ಇಲಾಖೆಯು ಸಾರ್ವಜನಿಕರ ಅನುಕೂಲವನ್ನು ಗಮನದಲ್ಲಿಟ್ಟುಕೊಂಡು ಕಚೇರಿಯಲ್ಲಿಯೇ ಅರ್ಜಿಗಳನ್ನು ಸ್ವೀಕರಿಸುವ ಕಾರ್ಯ ಆರಂಭಿಸಿದೆ.

ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳಾಗಲು ಅಥವಾ ಅಗತ್ಯ ತಿದ್ದುಪಡಿ ಹಾಗೂ ಮರು ಅರ್ಜಿ ಸಲ್ಲಿಸಬೇಕಿರುವ ಗ್ರಾಹಕರು ಅಗತ್ಯ ದಾಖಲೆಗಳೊಂದಿಗೆ ನೆಲ್ಯಾಡಿ ಮೆಸ್ಕಾಂ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಅಧಿಕಾರಿಗಳು ಸ್ಥಳದಲ್ಲೇ ಅಗತ್ಯ ಮಾರ್ಗದರ್ಶನ ನೀಡುತ್ತಿದ್ದು, ಅರ್ಜಿ ಪ್ರಕ್ರಿಯೆ ಸುಗಮವಾಗಿ ನಡೆಯುತ್ತಿದೆ. ಗ್ರಾಮೀಣ ಭಾಗದ ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಫೋಟೋ :25ಕೆಎನ್ ಜ್ಯೋತಿ