ರಾಜ್ಯಾದ್ಯಂತ ಕಂಬಳಕ್ಕೆ ಅಸ್ತು

Contributed byanil.kumar2@timesgroup.com|Vijaya Karnataka

ಸುಪ್ರೀಂ ಕೋರ್ಟ್ ಕಂಬಳ ಆಯೋಜನೆಗೆ ಅನುಮತಿ ನೀಡಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲದೆ ರಾಜ್ಯದ ಇತರ ಭಾಗಗಳಲ್ಲೂ ಕಂಬಳ ನಡೆಸಬಹುದು. ಪೀಪಲ್‌ ಫಾರ್‌ ದಿ ಎಥಿಕಲ್‌ ಟ್ರೀಟ್‌ಮೆಂಟ್‌ ಆಫ್‌ ಅನಿಮಲ್‌ ಸಂಸ್ಥೆಯ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಕಂಬಳವನ್ನು ನಿರ್ದಿಷ್ಟ ಪ್ರದೇಶಕ್ಕೆ ಸೀಮಿತಗೊಳಿಸಬೇಕೆಂಬ ಪ್ರಶ್ನೆಗೆ ಸುಪ್ರೀಂ ಕೋರ್ಟ್ ಅರ್ಜಿದಾರರನ್ನು ಕೇಳಿದೆ.

supreme court signals green light for kambala

ಹೊಸದಿಲ್ಲಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಹೊರತುಪಡಿಸಿ ಕರ್ನಾಟಕದ ಇತರ ಭಾಗಗಳಲ್ಲಿ ಕಂಬಳ ಆಯೋಜನೆ ಪ್ರಶ್ನಿಸಿ ‘ಪೀಪಲ್ ಫಾರ್ ದಿ ಎಥಿಕಲ್ ಟ್ರೀಟ್ ಮೆಂಟ್ ಆಫ್ ಅನಿಮಲ್ ’(ಪೆಟಾ) ಸಂಸ್ಥೆ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸದೆ. ಆ ಮೂಲಕ ರಾಜ್ಯದ ಯಾವುದೇ ಭಾಗದಲ್ಲಿಕಂಬಳ ನಡೆಸಲು ಹಸಿರು ನಿಶಾನೆ ತೋರಿದೆ. ಈ ಸಂಬಂಧ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿರುವ ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠವು, ‘‘ಕಂಬಳ ಕ್ರೀಡೆಯನ್ನು ರಾಜ್ಯದ ಒಂದು ನಿರ್ದಿಷ್ಟ ಪ್ರದೇಶಕ್ಕೆ ಮಾತ್ರ ಏಕೆ ಸೀಮಿತಗೊಳಿಸಬೇಕು,’’ ಎಂದು ಅರ್ಜಿದಾರರನ್ನು ಪ್ರಶ್ನಿಸಿದೆ.