ಮೈಸೂರು: ನಗರದ ಯಾದವಗಿರಿ ನಿವಾಸಿ, ಹಿರಿಯ ಪತ್ರಕರ್ತ ಕೆ.ಜೆ.ಕುಮಾರ್ (74) ಹೃದಯಾಘಾತದಿಂದ ಬುಧವಾರ ನಿಧನರಾದರು. ಮೃತರಿಗೆ ಪತ್ನಿ ಉಷಾ, ಪುತ್ರಿ ಸುನಯ ಶೆಟ್ಟಿ, ಸಹೋದರಿಯಾದ ನಗರ ಪಾಲಿಕೆ ಮಾಜಿ ಸದಸ್ಯೆ ಪ್ರಮೀಳಾ ಪ್ರಕಾಶ್ ಇದ್ದಾರೆ. ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ರುದ್ರಭೂಮಿಯಲ್ಲಿಅಂತ್ಯಕ್ರಿಯೆ ಗುರುವಾರ ಮಧ್ಯಾಹ್ನ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೂರು ದಶಕಗಳಿಗೂ ಹೆಚ್ಚು ಕಾಲ ಮೈಸೂರಿನ ಪತ್ರಿಕೋದ್ಯಮದಲ್ಲಿಸೇವೆ ಸಲ್ಲಿಸಿರುವ ಕೆ.ಜೆ.ಕುಮಾರ್ , ಸಿನಿಮಾ ಬರಹಗಳಿಗೆ ಹೆಸರಾಗಿದ್ದರು.ತಮಿಳುನಟ ರಜನಿಕಾಂತ್ , ದಿ.ಅಂಬರೀಶ್ ಅವರ ಜತೆಗೆ ಒಡನಾಟ ಹೊಂದಿದ್ದರು.

