ಕೋರ್ಟ್ ಸೂಚನೆ ಮೇರೆಗೆ ತನಿಖಾ ತಂಡ ಬದಲು ಯಾದಗಿರಿ: ಶಹಾಪುರ ತಾಲೂಕಿನ ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ ವಿರುದ್ಧದ ಪೋಕ್ಸೊ ಪ್ರಕರಣದ ತನಿಖಾಧಿಕಾರಿಯನ್ನು ಕೋರ್ಟ್ ಸೂಚನೆ ಮೇರೆಗೆ ಬದಲಿಸಲಾಗಿದೆ. ಪ್ರಕರಣದಲ್ಲಿಆಗಿರುವ ಲೋಪಗಳನ್ನು ನ್ಯಾಯಾಲಯ ಪತ್ತೆ ಮಾಡಿ ಸೂಚನೆ ನೀಡಿದ ಹಿನ್ನಲೆಯಲ್ಲಿಮಹಿಳಾ ಅಧಿಕಾರಿಯನ್ನು ಹಾಗೂ ಸೈಬರ್ ಕ್ರೈಂ ವಿಭಾಗದ ಅಧಿಕಾರಿಯನ್ನು ತನಿಖಾ ತಂಡಕ್ಕೆ ನೇಮಿಸಲಾಗಿದೆ ಎಂದು ಎಸ್ ಪಿ ಪೃಥ್ವಿಕ್ ಶಂಕರ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿಮಲ್ಲಿಕಾರ್ಜುನ ಮುತ್ಯಾ ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೊ ತುಣುಕುಗಳು ಹಾಗೂ ಫೋಟೊಗಳನ್ನು ತೆಗೆದು ಹಾಕಲು ಕ್ರಮ ಜರುಗಿಸಲಾಗುತ್ತಿದೆ ಎಂದು ವಿಜಯ ಕರ್ನಾಟಕಕ್ಕೆ ಮಾಹಿತಿ ನೀಡಿದ್ದಾರೆ.

