ಕುಂದಾಪುರ : ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ವತಿಯಿಂದ ಬ್ಯಾರೀಸ್ ನಾಲೆಡ್ಜ್ ಕ್ಯಾಂಪಸ್ ನಲ್ಲಿಇಫ್ತಾರ್ ಕೂಟ ಸಡಗರದಿಂದ ಜರುಗಿತು.
ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವಿಶ್ವಸ್ಥ ಮಂಡಳಿಯ ಸದಸ್ಯ ಡಾ. ಆಸೀಫ್ ಬ್ಯಾರಿ ಮಾತನಾಡಿ, ವಿದ್ಯಾರ್ಥಿಗಳು ಅತ್ಯಂತ ಶಿಸ್ತುಬದ್ಧವಾಗಿ ಮತ್ತು ಉತ್ಸಾಹದಿಂದ ಈ ಇಫ್ತಾರ್ ಕೂಟವನ್ನು ಸಂಘಟಿಸಿರುವುದು ಶ್ಲಾಘನೀಯ ಎಂದರು.
ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ನಿರ್ದೇಶಕಿ ಅಶ್ವಿನಿ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳ ಈ ಸಂಯೋಜನೆ ಸೌಹಾರ್ದತೆಯ ಮೆಟ್ಟಿಲು ಎಂದರು. ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹಾಜಿ ಕೆ.ಎಂ ಅಬ್ದುಲ್ ರೆಹಮಾನ್ ಬ್ಯಾರಿ ಉಪಸ್ಥಿತರಿದ್ದರು.
ಪೋಟೊ//14ಕೆ-ಇಎಫ್ ಟಿ//. ಇಪ್ತಾರ್ ಕೂಟ

